Homeಮುಖಪುಟಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

ಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಅವರ ಅಮಾನತು ಆದೇಶ ಹಿಂಪಡೆಯಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದು, ಸಭಾಪತಿ ಜಗದೀಪ್ ಧನ್ಖರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಸಂಸತ್ತಿನನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮೂಲಕ ಸ್ಪಷ್ಟನೆ ಪಡೆಯಲು ತೃಣಮೂಲ ಕಾಂಗ್ರೆಸ್ ಸಂಸದರು ತಮ್ಮ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

‘ಡಿಸೆಂಬರ್ 13, 2023 ರಂದು ಲೋಕಸಭೆಯಲ್ಲಿ ನಡೆದ ಆಘಾತಕಾರಿ ಘಟನೆಯ ಕುರಿತು ಗೃಹ ವ್ಯವಹಾರಗಳ ಸಚಿವರ ಹೇಳಿಕೆಗಾಗಿ ‘ಇಂಡಿಯಾ’ ಕೂಟದ ಪಕ್ಷಗಳ ಸಾಮೂಹಿಕ ಬೇಡಿಕೆಯ ಬಗ್ಗೆ ನಿಮ್ಮ ಗಮನ ಸೆಳೆಯಲು ಅವರು ಪ್ರಯತ್ನಿಸುತ್ತಿದ್ದರು. ಇದು ಸಂಪೂರ್ಣವಾಗಿ ನ್ಯಾಯಸಮ್ಮತ ಬೇಡಿಕೆಯಾಗಿದೆ’ ಎಂದು ತಿಳಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ಸದನದಲ್ಲಿ ಈ ವಿಷಯದ ಕುರಿತು ಮಾತನಾಡದ ಅಮಿತ್ ಶಾ, ಟಿವಿ ಚಾನೆಲ್‌ನೊಂದಿಗೆ ಮಾತನಾಡಿರುವುದನ್ನು ಖರ್ಗೆ ಆಕ್ಷೇಪಿಸಿದರು. ‘ಗೃಹ ಸಚಿವರು 13ನೇ ಡಿಸೆಂಬರ್ 2023 ರ ಘಟನೆಯ ಬಗ್ಗೆ ಮಾಧ್ಯಮ ವೇದಿಕೆಯಲ್ಲಿ ಮಾತನಾಡಬಹುದು. ಆದರೆ ಸಂಸತ್ತಿನ ಅಧಿವೇಶನ ನಡೆಯುವಾಗ ಸದನದಲ್ಲಿ ಹೇಳಿಕೆಯ ರೂಪದಲ್ಲಿ ಹೇಳಲು ನಿರಾಕರಿಸುವುದು ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 13 ರಂದು ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಜಿಗಿದರು. ಘಟನೆ ಕುರಿತು ಅಮಿತ್ ಶಾ ಹೇಳಿಕೆ ನೀಡುವಂತೆ ವಿರೋಧ ಪಕ್ಷಗಳಿಂದ ಬೇಡಿಕೆ ಇಟ್ಟು, ಆಗ್ರಹಿಸಿದವು. ಕೆಲವು ಸದಸ್ಯರು ಗೃಹ ಸಚಿವರ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ಕಲಾಪ ಆರಂಭವಾದ ಸ್ವಲ್ಪ ಹೊತ್ತಿನಲ್ಲೆ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಸದನದ ಬಾವಿಗೆ ಇಳಿದರು. ಡೆರೆಕ್ ಒಬ್ರಿಯನ್ ಕೂಡ ಸಭಾಧ್ಯಕ್ಷರ ಕುರ್ಚಿಯ ಮುಂಭಾಗಕ್ಕೆ ತೆರಳಿ ಕೈ ಎತ್ತಿ ಬೇಡಿಕೆ ಇಟ್ಟರು. ಇದರಿಂದ ಕೆರಳಿದ ರಾಜ್ಯಸಭಾ ಅಧ್ಯಕ್ಷರು ಟಿಎಂಸಿ ಸಂಸದರನ್ನು ಹೆಸರಿಸಿ ಸದನದಿಂದ ಹೊರಹೋಗುವಂತೆ ಸೂಚಿಸಿದರು.
ಆಡಳಿತ ಪಕ್ಷದ ನಾಯಕ ಪಿಯೂಷ್ ಗೋಯಲ್ ಅವರು ಅಧಿವೇಶನದ ಉಳಿದ ಭಾಗಕ್ಕೆ ಒಬ್ರಿಯನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಒಬ್ರಿಯಾನ್ ಮೌನ ಪ್ರತಿಭಟನೆ:

ಕಳೆದ ಗುರುವಾರ ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಅಂದು ಟೀಕಿಸಿ, ಅದನದಿಂದ ಹೊರಹೋಗುವಂತೆ ಸೂಚಿಸಿದ್ದರು.

13 ಜನ ಲೋಕಸಭಾ ಸಂಸದರ ಅಮಾನತು:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ್ದಕ್ಕೆ ಕಳೆದ ಗುರುವಾರ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷದ 13 ಜನ ಸದಸ್ಯರನ್ನು ಸ್ಪೀಕರ್ ಚಳಿಗಾಲ ಅಧೀವೇಶನ ಮುಗಿಯುವವರೆಗೆ ಅಮಾನತು ಮಾಡಿದ್ದಾರೆ.
ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...