Homeಮುಖಪುಟಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

ಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಅವರ ಅಮಾನತು ಆದೇಶ ಹಿಂಪಡೆಯಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದು, ಸಭಾಪತಿ ಜಗದೀಪ್ ಧನ್ಖರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಸಂಸತ್ತಿನನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮೂಲಕ ಸ್ಪಷ್ಟನೆ ಪಡೆಯಲು ತೃಣಮೂಲ ಕಾಂಗ್ರೆಸ್ ಸಂಸದರು ತಮ್ಮ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

‘ಡಿಸೆಂಬರ್ 13, 2023 ರಂದು ಲೋಕಸಭೆಯಲ್ಲಿ ನಡೆದ ಆಘಾತಕಾರಿ ಘಟನೆಯ ಕುರಿತು ಗೃಹ ವ್ಯವಹಾರಗಳ ಸಚಿವರ ಹೇಳಿಕೆಗಾಗಿ ‘ಇಂಡಿಯಾ’ ಕೂಟದ ಪಕ್ಷಗಳ ಸಾಮೂಹಿಕ ಬೇಡಿಕೆಯ ಬಗ್ಗೆ ನಿಮ್ಮ ಗಮನ ಸೆಳೆಯಲು ಅವರು ಪ್ರಯತ್ನಿಸುತ್ತಿದ್ದರು. ಇದು ಸಂಪೂರ್ಣವಾಗಿ ನ್ಯಾಯಸಮ್ಮತ ಬೇಡಿಕೆಯಾಗಿದೆ’ ಎಂದು ತಿಳಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ಸದನದಲ್ಲಿ ಈ ವಿಷಯದ ಕುರಿತು ಮಾತನಾಡದ ಅಮಿತ್ ಶಾ, ಟಿವಿ ಚಾನೆಲ್‌ನೊಂದಿಗೆ ಮಾತನಾಡಿರುವುದನ್ನು ಖರ್ಗೆ ಆಕ್ಷೇಪಿಸಿದರು. ‘ಗೃಹ ಸಚಿವರು 13ನೇ ಡಿಸೆಂಬರ್ 2023 ರ ಘಟನೆಯ ಬಗ್ಗೆ ಮಾಧ್ಯಮ ವೇದಿಕೆಯಲ್ಲಿ ಮಾತನಾಡಬಹುದು. ಆದರೆ ಸಂಸತ್ತಿನ ಅಧಿವೇಶನ ನಡೆಯುವಾಗ ಸದನದಲ್ಲಿ ಹೇಳಿಕೆಯ ರೂಪದಲ್ಲಿ ಹೇಳಲು ನಿರಾಕರಿಸುವುದು ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 13 ರಂದು ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಜಿಗಿದರು. ಘಟನೆ ಕುರಿತು ಅಮಿತ್ ಶಾ ಹೇಳಿಕೆ ನೀಡುವಂತೆ ವಿರೋಧ ಪಕ್ಷಗಳಿಂದ ಬೇಡಿಕೆ ಇಟ್ಟು, ಆಗ್ರಹಿಸಿದವು. ಕೆಲವು ಸದಸ್ಯರು ಗೃಹ ಸಚಿವರ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ಕಲಾಪ ಆರಂಭವಾದ ಸ್ವಲ್ಪ ಹೊತ್ತಿನಲ್ಲೆ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಸದನದ ಬಾವಿಗೆ ಇಳಿದರು. ಡೆರೆಕ್ ಒಬ್ರಿಯನ್ ಕೂಡ ಸಭಾಧ್ಯಕ್ಷರ ಕುರ್ಚಿಯ ಮುಂಭಾಗಕ್ಕೆ ತೆರಳಿ ಕೈ ಎತ್ತಿ ಬೇಡಿಕೆ ಇಟ್ಟರು. ಇದರಿಂದ ಕೆರಳಿದ ರಾಜ್ಯಸಭಾ ಅಧ್ಯಕ್ಷರು ಟಿಎಂಸಿ ಸಂಸದರನ್ನು ಹೆಸರಿಸಿ ಸದನದಿಂದ ಹೊರಹೋಗುವಂತೆ ಸೂಚಿಸಿದರು.
ಆಡಳಿತ ಪಕ್ಷದ ನಾಯಕ ಪಿಯೂಷ್ ಗೋಯಲ್ ಅವರು ಅಧಿವೇಶನದ ಉಳಿದ ಭಾಗಕ್ಕೆ ಒಬ್ರಿಯನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಒಬ್ರಿಯಾನ್ ಮೌನ ಪ್ರತಿಭಟನೆ:

ಕಳೆದ ಗುರುವಾರ ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಅಂದು ಟೀಕಿಸಿ, ಅದನದಿಂದ ಹೊರಹೋಗುವಂತೆ ಸೂಚಿಸಿದ್ದರು.

13 ಜನ ಲೋಕಸಭಾ ಸಂಸದರ ಅಮಾನತು:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ್ದಕ್ಕೆ ಕಳೆದ ಗುರುವಾರ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷದ 13 ಜನ ಸದಸ್ಯರನ್ನು ಸ್ಪೀಕರ್ ಚಳಿಗಾಲ ಅಧೀವೇಶನ ಮುಗಿಯುವವರೆಗೆ ಅಮಾನತು ಮಾಡಿದ್ದಾರೆ.
ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...