Homeಮುಖಪುಟರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸುವುದು ನಮ್ಮ ಸಂಪುಟ ಸಭೆಯ ಮೊದಲ ತೀರ್ಮಾನವಾಗಲಿದೆ ಎಂದು ನ್ಯಾಶನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಬುಧವಾರ ಹೇಳಿದ್ದಾರೆ. ಈ ನಿರ್ಣಯವನ್ನು ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಬಳಿಕ ಒಯ್ಯಲಾಗುವುದು ಎಂದು ತಿಳಿಸಿದ್ದಾರೆ.

ಸಂವಿಧಾನದ 370ನೇ ವಿಧಿಯ ರದ್ದತಿ ಬಳಿಕ ಜಮ್ಮು ಕಾಶ್ಮೀರ ಕಳೆದುಕೊಂಡಿರುವ ರಾಜ್ಯದ ಸ್ಥಾನಮಾನವನ್ನು ಮರಳಿ ಕೊಡಬೇಕು ಎನ್ನುವುದು ನಮ್ಮ ದೀರ್ಘಕಾಲದ ಬೇಡಿಕೆ ಎಂದಿದ್ದಾರೆ.

“ನಮ್ಮ ಸಂಪುಟದ ಮೊದಲ ನಡಾವಳಿ ರಾಜ್ಯದ ಸ್ಥಾನಮಾನವನ್ನು ಮರಳಿ ನೀಡುವಂತೆ ಒತ್ತಾಯಿಸುವ ನಿರ್ಣಯವನ್ನು ಆಂಗೀಕರಿಸುವುದು. ಯಾರೇ ಮುಖ್ಯಮಂತ್ರಿಯಾದರೂ, ಆ ನಿರ್ಣಯದೊಂದಿಗೆ ದೆಹಲಿಗೆ ತೆರಳಿ, ತಮ್ಮ ಭರವಸೆಯನ್ನು ಈಡೇರಿಸುವಂತೆ ದೇಶದ ಹಿರಿಯ ನಾಯಕತ್ವವನ್ನು ಒತ್ತಾಯಿಸುವರು. ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಎನ್ನುವುದು ಇಡೀ ರಾಜ್ಯಕ್ಕೆ ನೀಡಿದ ಭರವಸೆ. ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ನೀಡಿದ ಭರವಸೆಯಲ್ಲ” ಎಂದು ಉಮರ್ ಅಬ್ದುಲ್ಲಾ ಹೇಳಿದ್ದಾರೆ.

ಸಂವಿಧಾನದ 370ನೇ ವಿಧಿ ಬಗ್ಗೆ ಪ್ರಸ್ತಾವಿಸಿದ ಅವರು, “ನಾವು ತಕ್ಷಣಕ್ಕೆ ನೀಡಲಾಗದ ಭರವಸೆಯನ್ನು ನೀಡುವ ಮೂಲಕ ನಾವು ಜನರನ್ನು ಮೂರ್ಖರನ್ನಾಗಿಸುವುದಿಲ್ಲ. ಆದಾಗ್ಯೂ 370ನೇ ವಿಧಿ ಬಗ್ಗೆ ಮಾತುಕತೆ ಮುಂದುವರಿಸುತ್ತೇವೆ ಹಾಗೂ ರಾಷ್ಟ್ರಮಟ್ಟದಲ್ಲಿ ಭವಿಷ್ಯದ ಸರ್ಕಾರ, ಈ ವಿಚಾರದಲ್ಲಿ ನಮ್ಮ ಜೊತೆಗೆ ಇರಲು ಬಯಸಬಹುದು” ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸರ್ಕಾರ ರಚನೆಯ ಪ್ರಕ್ರಿಯೆ ಪ್ರಾರಂಭಿಸಲು ಉಮರ್ ಅಬ್ದುಲ್ಲಾ ಇಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವಿಧಾನಸಭೆ ಚುನಾವವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ 42 ಮತ್ತು ಕಾಂಗ್ರೆಸ್ 6 ಸೇರಿ ಮೈತ್ರಿ ಒಟ್ಟು 48 ಸ್ಥಾನಗಳನ್ನು ಪಡೆದಿದ್ದು ಸರ್ಕಾರ ರಚಿಸಲು ಅಣಿಯಾಗಿದೆ. ಉಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.

ಇದನ್ನೂ ಓದಿ : ದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...