Homeಮುಖಪುಟರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸುವುದು ನಮ್ಮ ಸಂಪುಟ ಸಭೆಯ ಮೊದಲ ತೀರ್ಮಾನವಾಗಲಿದೆ ಎಂದು ನ್ಯಾಶನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಬುಧವಾರ ಹೇಳಿದ್ದಾರೆ. ಈ ನಿರ್ಣಯವನ್ನು ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಬಳಿಕ ಒಯ್ಯಲಾಗುವುದು ಎಂದು ತಿಳಿಸಿದ್ದಾರೆ.

ಸಂವಿಧಾನದ 370ನೇ ವಿಧಿಯ ರದ್ದತಿ ಬಳಿಕ ಜಮ್ಮು ಕಾಶ್ಮೀರ ಕಳೆದುಕೊಂಡಿರುವ ರಾಜ್ಯದ ಸ್ಥಾನಮಾನವನ್ನು ಮರಳಿ ಕೊಡಬೇಕು ಎನ್ನುವುದು ನಮ್ಮ ದೀರ್ಘಕಾಲದ ಬೇಡಿಕೆ ಎಂದಿದ್ದಾರೆ.

“ನಮ್ಮ ಸಂಪುಟದ ಮೊದಲ ನಡಾವಳಿ ರಾಜ್ಯದ ಸ್ಥಾನಮಾನವನ್ನು ಮರಳಿ ನೀಡುವಂತೆ ಒತ್ತಾಯಿಸುವ ನಿರ್ಣಯವನ್ನು ಆಂಗೀಕರಿಸುವುದು. ಯಾರೇ ಮುಖ್ಯಮಂತ್ರಿಯಾದರೂ, ಆ ನಿರ್ಣಯದೊಂದಿಗೆ ದೆಹಲಿಗೆ ತೆರಳಿ, ತಮ್ಮ ಭರವಸೆಯನ್ನು ಈಡೇರಿಸುವಂತೆ ದೇಶದ ಹಿರಿಯ ನಾಯಕತ್ವವನ್ನು ಒತ್ತಾಯಿಸುವರು. ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಎನ್ನುವುದು ಇಡೀ ರಾಜ್ಯಕ್ಕೆ ನೀಡಿದ ಭರವಸೆ. ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ನೀಡಿದ ಭರವಸೆಯಲ್ಲ” ಎಂದು ಉಮರ್ ಅಬ್ದುಲ್ಲಾ ಹೇಳಿದ್ದಾರೆ.

ಸಂವಿಧಾನದ 370ನೇ ವಿಧಿ ಬಗ್ಗೆ ಪ್ರಸ್ತಾವಿಸಿದ ಅವರು, “ನಾವು ತಕ್ಷಣಕ್ಕೆ ನೀಡಲಾಗದ ಭರವಸೆಯನ್ನು ನೀಡುವ ಮೂಲಕ ನಾವು ಜನರನ್ನು ಮೂರ್ಖರನ್ನಾಗಿಸುವುದಿಲ್ಲ. ಆದಾಗ್ಯೂ 370ನೇ ವಿಧಿ ಬಗ್ಗೆ ಮಾತುಕತೆ ಮುಂದುವರಿಸುತ್ತೇವೆ ಹಾಗೂ ರಾಷ್ಟ್ರಮಟ್ಟದಲ್ಲಿ ಭವಿಷ್ಯದ ಸರ್ಕಾರ, ಈ ವಿಚಾರದಲ್ಲಿ ನಮ್ಮ ಜೊತೆಗೆ ಇರಲು ಬಯಸಬಹುದು” ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸರ್ಕಾರ ರಚನೆಯ ಪ್ರಕ್ರಿಯೆ ಪ್ರಾರಂಭಿಸಲು ಉಮರ್ ಅಬ್ದುಲ್ಲಾ ಇಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವಿಧಾನಸಭೆ ಚುನಾವವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ 42 ಮತ್ತು ಕಾಂಗ್ರೆಸ್ 6 ಸೇರಿ ಮೈತ್ರಿ ಒಟ್ಟು 48 ಸ್ಥಾನಗಳನ್ನು ಪಡೆದಿದ್ದು ಸರ್ಕಾರ ರಚಿಸಲು ಅಣಿಯಾಗಿದೆ. ಉಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.

ಇದನ್ನೂ ಓದಿ : ದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...