Homeಕರ್ನಾಟಕಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯಿಸಿ ಧರಣಿ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯಿಸಿ ಧರಣಿ

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ಪ್ರಕ್ರಿಯೆಯನ್ನು ಆರಂಭಿಸುವಂತೆ ಒತ್ತಾಯಿಸಿ ಆಯ್ಕೆಯಾದ ಅಭ್ಯರ್ಥಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಪ್ರಾರಂಭಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಎರಡು ವರ್ಷ ಮೇಲಾಗಿದ್ದರೂ ಇನ್ನೂ ಆದೇಶ ಪ್ರತಿ ದೊರಕಿಲ್ಲ ಎಂದು ಆರೋಪಿಸಿರುವ ಸಾವಿರಾರು ಅಭ್ಯರ್ಥಿಗಳು ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಒತ್ತಾಯಿಸಿದರು.

2021 ಸೆಪ್ಟೆಂಬರ್ 09 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿದ್ದ 26 ವಿಷಯಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಸಂಬಂಧ ಅಧಿಸೂಚನೆಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆ.ಇ.ಎ) 12 ಮಾರ್ಚ್ 2022 ರಿಂದ 16 ಮಾರ್ಚ್ 2022ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತು. ದಿನಾಂಕ 18 ಆಗಸ್ಟ್ 2022 ರಂದು 26 ವಿಷಯಗಳ ಫಲಿತಾಂಶ ಮತ್ತು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಗೊಂಡಿದೆ. ದಿನಾಂಕ 15 ಅಕ್ಟೋಬರ್ 2022 ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟವಾಗಿದೆ. ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡ ಬಳಿಕ ವಿಷಯವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 30/01/2023ರಂದು ಹೊರಬಂದಿತು. ಹೀಗೆ ಒಟ್ಟು 1242 ಹುದ್ದೆಗಳಲ್ಲಿ 1208 ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ, ಈ ಪಟ್ಟಿಯು ದಿನಾಂಕ07/03/2023 ಹಾಗೂ 12-06-2023 ರಂದು ಎರಡು ಹಂತಗಳಲ್ಲಿ ಸರ್ಕಾರಕ್ಕೆ ತಲುಪಿದೆ. ಆದರೆ ಅಲ್ಲಿಂದ ಮುಂದಕ್ಕೆ ಹೋಗುತ್ತಿಲ್ಲ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ಬಾಕಿ ಉಳಿದಿರುವ ಆಯ್ಕೆ ಪಟ್ಟಿಯ ಗೆಜೆಟ್, ದಾಖಲಾತಿ ಪರಿಶೀಲನೆ, ಮೆಡಿಕಲ್-ಪೊಲೀಸ್ ವೆರಿಫಿಕೇಶನ್, ಅಂಕಪಟ್ಟಿಗಳ ನೈಜತಾ ಪ್ರಮಾಣ, ಸಿಂಧುತ್ವದಂತಹ ಪ್ರಕ್ರಿಯೆಗಳು ಈಗಾಗಲೇ ಮುಗಿದಿರಬೇಕಾಗಿತ್ತು. ಇವುಗಳು ಇನ್ನೂ ಆರಂಭವಾಗಿಲ್ಲ. ಈಗಲಾದರೂ ಆರಂಭವಾಗಲಿ ಎಂದು ಒತ್ತಾಯಿಸಿದ್ದಾರೆ.

371ಜೆ ಮೀಸಲಾತಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರಿಂದ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ ಈ ತರಹದ ಆದೇಶಗಳು ಇದ್ದಾಗ್ಯೂ ಪ್ರಸ್ತುತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ(ಜಿ.ಪಿ.ಎಸ್.ಟಿ.ಆರ್)ಯಲ್ಲಿ ಈಗಾಗಲೇ ಎಲ್ಲಾ ಪ್ರಕ್ರಿಯೆಗಳು ಮುಗಿಸಿ, ಸ್ಥಳನಿಯುಕ್ತಿ ಮತ್ತು ಆದೇಶ ಪತ್ರವನ್ನು ಮಾತ್ರ ತಡೆಹಿಡಿಯಲಾಗಿದೆ. 2017ರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಗೌರವಾನ್ವಿತ ನ್ಯಾಯಾಲಯದ ಅಂತಿಮ ತೀರ್ಪಿನ ನಿಬಂಧನೆಗೆ ಒಳಪಟ್ಟ ಷರತ್ತುಬದ್ಧ ಆದೇಶವನ್ನೂ ನೀಡಲಾಗಿದೆ. ಹೀಗೆ ನಮ್ಮ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ಕ್ಕೆ ಸಂಬಂಧಿಸಿದ ಬಾಕಿ ಇರುವ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಮುಂದುವರೆಸುವಲ್ಲಿ ಸರ್ಕಾರವು ತನ್ನ ಇಚ್ಚಾಶಕ್ತಿಯನ್ನು ತೋರಬೇಕೆಂದು ಮನವಿ ಮಾಡಿದರು.

ಕೆಲವರಿಂದಾಗಿ ಎದುರಾಗಿರುವ ಕಾನೂನಾತ್ಮಕ ಸಮಸ್ಯೆಯು, ಯಾವುದೇ ಕಾನೂನಾತ್ಮಕ ಸಮಸ್ಯೆಗಳಿಲ್ಲದೆ ಆಯ್ಕೆಯಾಗಿರುವ ಉಳಿದ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ತೊಂದರೆಯಾದಂತೆ, ನ್ಯಾಯ ಒದಗಿಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಅಭ್ಯರ್ಥಿಗಳು ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ಪರಿಷತ್ ಶಾಸಕರಾದ ಬೋಜೆಗೌಡರವರು, ವೈ ಎ ನಾರಾಯಣ ಸ್ವಾಮಿಯವರು,  ಮರಿತಿಬ್ಬೇಗೌಡರವರು, ದೇವೇಗೌಡರವರು ಸೇರಿದಂತೆ ಹಲವು ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ; ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...