Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...