Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...