Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...