Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...