Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...