Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...