Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...