Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...