Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...