Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...