Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...