Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...