Homeಮುಖಪುಟ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ 'ಬಿಹಾರ ಮೇ ಈ ಬಾ' ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು 'ಬಿಹಾರ ಮೇ ಕಾ ಬಾ' ಹಾಡಿಗೆ ಪ್ರತಿಕ್ರಿಯೆಯಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಗೀತೆ ‘ಬಿಹಾರ ಮೇ ಈ ಬಾ’ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿರೋಧ ಒಡ್ಡುವಂತಹ ಹಾಡುಗಳನ್ನು ಸಂಯೋಜಿಸಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಬಿಡುಗಡೆ ಮಾಡಿದ್ದು, ಈ ಹಾಡುಗಳು ವೈರಲ್ ಆಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ವಿಮರ್ಶೆ ಮಾಡಿ ಹಾಡಿರುವ ಭೋಜ್‌ಪುರಿ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಪ್ರಜಾಪ್ರಭುತ್ವ ನಮಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ನೀಡಿದೆ. ನಾನದನ್ನೂ ಮಾಡುತ್ತಿದ್ದೇನೆ ಅಷ್ಟೇ” ಎನ್ನುತ್ತಾರೆ 23 ವರ್ಷದ ಗಾಯಕಿ ನೇಹಾ ಸಿಂಗ್ ರಾಥೋಡ್.

ನೇಹಾ ಸಿಂಗ್ ರಾಥೋಡ್ ಅವರ ಹೊಸ ಹಾಡು ವಾಸ್ತವವಾಗಿ ಅವರ ಹಿಂದಿನ ಹಾಡು ‘ಬಿಹಾರ ಮೇ ಕಾ ಬಾ (ಬಿಹಾರದಲ್ಲಿ ಏನಿದೆ)’ ಎಂಬ ಶೀರ್ಷಿಕೆಯ ವಿಸ್ತೃತ ಆವೃತ್ತಿಯಾಗಿದೆ. ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 13 ರಂದು ಬಿಜೆಪಿ ಪಕ್ಷದ ಐಟಿ ಸೆಲ್ ಬಿಡುಗಡೆ ಮಾಡಿದ ಬಿಜೆಪಿಯ ‘ಬಿಹಾರ ಮೇ ಇ ಬಾ (ಇದು ಬಿಹಾರದಲ್ಲಿದೆ)’ ಗೀತೆಗೆ ಪ್ರತಿಕ್ರಿಯಿಸುವುದು ಹೊಸ ಹಾಡನ್ನು ಬಿಡುಗಡೆ ಮಾಡುವ ಹಿಂದಿನ ಆಲೋಚನೆಯಾಗಿತ್ತು. ಕುತೂಹಲಕಾರಿ ವಿಷಯವೆಂದರೆ ಬಿಜೆಪಿಯ ‘ಬಿಹಾರ ಮೇ ಈ ಬಾ’ ಹಾಡು ನೇಹಾ ಸಿಂಗ್ ರಾಥೋಡ್ ಅವರ ಹಳೆಯ ಹಾಡು ‘ಬಿಹಾರ ಮೇ ಕಾ ಬಾ’ ಹಾಡಿಗೆ ಪ್ರತಿಕ್ರಿಯೆಯಾಗಿತ್ತು.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

‘ಲಾ ಸುನಾ ಜಬಾಬ್, ಕಾ ಬಾ ಬಿಹಾರ ಮೇ’ ಎಂಬ ಹಾಡಿನಲ್ಲಿ, ಬಿಹಾರದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು, ಸ್ಟ್ರೆಚರ್‌ಗಳು, ಔಷಧಿಗಳು, ಆಂಬುಲೆನ್ಸ್‌ಗಳು ಮತ್ತು ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೇಹಾ ಉಲ್ಲೇಖಿಸಿದ್ದಾರೆ.

ತಮ್ಮ ಹಾಡುಗಳಲ್ಲಿ ಎನ್‌ಡಿಎ ಸರ್ಕಾರವನ್ನು ಟೀಕಿಸಿ, ನಾಯಕರು ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳನ್ನು ಈಡೆರಿಸುವುದಿಲ್ಲ ಎಂದಿದ್ದಾರೆ. ಇವರಿಗೆ ಬಡ ಜನರೊಂದಿಗೆ ಯಾವುದೇ ಸಂಬಂಧವಿಲ್ಲ, ನಾಯಕರು ಅಧಿಕಾರದಲ್ಲಿರಲು ಬಯಸುತ್ತಾರೆ ಎಂದು ನೇಹಾ ಹೇಳುತ್ತಾರೆ.

ನೇಹಾ ಅವರ ಈ ಹಾಡುಗಳು 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಧಕ್ಕೆ ತರುತ್ತದೆ ಎಂದು ಪಾಟ್ನಾ ಮೂಲದ ರಾಜಕೀಯ ವಿಶ್ಲೇಷಕ ಸರೋಜ್ ಯಾದವ್ ಹೇಳಿದ್ದಾರೆ.

“ಗಾಯಕರು ಮತ್ತು ಕವಿಗಳು ಸಾಮಾನ್ಯವಾಗಿ ಆಡಳಿತ ಸರ್ಕಾರದ ಬಗ್ಗೆ ವಿಮರ್ಶಾತ್ಮಕವಾಗಿರುತ್ತಾರೆ. ಬಹುಶಃ ವಿಶ್ವದಲ್ಲೇ ದೊಡ್ಡದಾಗಿದೆ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷ ಬಿಜೆಪಿ ಈ ಗಾಯಕಿಗೆ ಉತ್ತರಿಸಿದ್ದು ಬಹುಶಃ ಮೊದಲ ಬಾರಿಗೆ ಎನ್ನುತ್ತಾರೆ ಯಾದವ್.

ಇದನ್ನೂ ಓದಿ: ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಆದರೆ, ನೇಹಾ ಸಿಂಗ್ ರಾಥೋಡ್ ಅವರ ಸ್ನೇಹಿತರು ಆಗಾಗ್ಗೆ ಆಕೆಗೆ ಅಪಾಯ ಉಂಟಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಮನೆಯ ಬಾಗಿಲಲ್ಲಿ ದುರ್ಷ್ಕಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶರಂತೆ ನಿನ್ನನ್ನು ಕೊನೆಗೊಳಿಸಬಹುದು ಎಂದು ಹಲವು ಸ್ನೇಹಿತರು ಎಚ್ಚರಿಸಿದ್ದಾರೆ ಎನ್ನುತ್ತಾರೆ.

 

ಇಂತಹ ಹೇಳಿಕೆಗಳು ಹೆಚ್ಚಿನ ಜನರನ್ನು ಹೆದರಿಸುತ್ತವೆ. ಆದರೆ ರಾಥೋಡ್ ತನ್ನ ಸ್ನೇಹಿತರ ಎಚ್ಚರಿಕೆಯ ಮಾತುಗಳನ್ನು ಅಭಿನಂದನೆಗಳಾಗಿ ತೆಗೆದುಕೊಳ್ಳುತ್ತಾರೆ.

ಬಿಹಾರ-ಉತ್ತರ ಪ್ರದೇಶ ಗಡಿಯಲ್ಲಿರುವ ಜಂದಾಹ ಎಂಬ ಪುಟ್ಟ ಹಳ್ಳಿಯಲ್ಲಿ ವಾಸಿಸುವ ನೇಹಾ ಸಿಂಗ್ ರಾಥೋಡ್, 2019 ರಲ್ಲಿ ಪದವಿ ಮುಗಿಸಿದ ನಂತರ ಜಾನಪದ ಗೀತೆಗಳನ್ನು ಹಾಡಲು ಪ್ರಾರಂಭಿಸಿದರು.  ಆಕೆಯ ಯೂಟ್ಯೂಬ್ ಚಾನೆಲ್ ಧಾರೋಹರ್‌ಗೆ 95 ಸಾವಿರ ಜನ ಚಂದಾದಾರರಾಗಿದ್ದಾರೆ. ಅವರ ಫೇಸ್‌ಬುಕ್ ಪುಟ ಮತ್ತು ಟ್ವಿಟರ್ ಖಾತೆ ಕೂಡ ಅಷ್ಟೇ ಜನಪ್ರಿಯವಾಗಿವೆ. ಅವರ ಅಭಿಮಾನಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು, ಮಾಜಿ ಅಧಿಕಾರಿಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸೇರಿದ್ದಾರೆ. ಹಳ್ಳಿಗಾಡು ಮತ್ತು ಬಂಡಾಯ ನೇಹಾ ಸಿಂಗ್ ರಾಥೋಡ್‌ನ ಹಾಡುಗಳ ವಿಶಿಷ್ಟ ಲಕ್ಷಣವಾಗಿದೆ.


ಇದನ್ನೂ ಓದಿ: ಅಂಬೇಡ್ಕರ್ ಜೀವನಾಧಾರಿತ “ಮಹಾನಾಯಕ” ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...