Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...