Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...