Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...