Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...