Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...