Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...