Homeಅಂತರಾಷ್ಟ್ರೀಯಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆಯಿಂದ ‘ಪ್ರಜಾಪ್ರಭುತ್ವ’ದ ಪಾಠ!

ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆಯಿಂದ ‘ಪ್ರಜಾಪ್ರಭುತ್ವ’ದ ಪಾಠ!

ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -
- Advertisement -

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆನಿಕೊಂಡಿರುವ ಭಾರತದ ಪ್ರಧಾನಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಪ್ರಜಾಪ್ರಭುತ್ವದ ಪಾಠ ಕೇಳುವಂತಾಗಿದ್ದು ದೇಶದ ಅತಿ ದೊಡ್ಡ ವಿಪರ್ಯಾಸ ಎಂದು ರಾಜ್ಯ ಕಾಂಗ್ರೆಸ್ ಶನಿವಾರ ಆಕ್ರೋಶ ವ್ಯಕ್ತಪಡಿಸಿದೆ.

ಮೂರು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶುಕ್ರವಾರ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು, ‘‘ವಿಶ್ವದೆಲ್ಲೆಡೆ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಇದನ್ನು ತಡೆಗಟ್ಟಲು, ನಮ್ಮ ದೇಶಗಳಲ್ಲಿ ಪ್ರಜಾಸತ್ತಾತ್ಮಕ ನೀತಿಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ರಕ್ಷಿಸಿಕೊಳ್ಳುವ ತುರ್ತು ಅಗತ್ಯವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

“ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವೆಲ್ಲಾ ಏನು ಮಾಡಬೇಕು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ದೇಶದ ಹಿತಾಸಕ್ತಿಗಾಗಿ ನಾವಿದನ್ನು ಮಾಡಲೇಬೇಕಿದೆ. ಪ್ರಜಾಪ್ರಭುತ್ವದ ಬಗ್ಗೆ ಭಾರತೀಯರ ಬದ್ಧತೆಯ ಬಗ್ಗೆ ಸ್ವತಃ ನನ್ನ ಕುಟುಂಬದವರನ್ನು ನೋಡಿ, ಅರ್ಥೈಸಿಕೊಂಡಿದ್ದೇನೆ. ಪ್ರಜಾಸತ್ತಾತ್ಮಕ ನೀತಿಗಳು ಮತ್ತು ಸಂಸ್ಥೆಗಳನ್ನು ಕಾಪಾಡಿಕೊಳ್ಳಲು ಏನೆಲ್ಲಾ ಮಾಡಬೇಕು ಎಂಬುದು ನನಗೆ ತಿಳಿದಿದೆ” ಎಂದು ಕಮಲಾ ಅವರು ಹೇಳಿದ್ದಾರೆ.

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರು ತಮಿಳುನಾಡಿನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರರಾಗಿದ್ದರು.

ಇದನ್ನೂ ಓದಿ: ಮೋದಿ ಪ್ರವಾಸ ವಿರೋಧಿಸಿ ವೈಟ್‌ ಹೌಸ್‌ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆ

ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್‌, ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ? ಎಂದು ಪ್ರಶ್ನಿಸಿದೆ.

ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಕಾಂಗ್ರೆಸ್, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆನಿಸಿಕೊಂಡಿದ್ದ ಭಾರತದ ಪ್ರಧಾನಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಪ್ರಜಾಪ್ರಭುತ್ವದ ಪಾಠ ಕೇಳುವಂತಾಗಿದ್ದು ದೇಶದ ಅತಿ ದೊಡ್ಡ ವಿಪರ್ಯಾಸ. ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ?” ಎಂದು ಕೇಳಿದೆ.

ಕಮಲಾ ಹ್ಯಾರಿಸ್ ಭೇಟಿಯ ನಂತರ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಜೊ ಬೈಡನ್‌ ‌ಅವರನ್ನು ಭೇಟಿಯಾದ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆಯ ನಂತರ ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಪ್ರಧಾನಿಯ ಮೂರು ದಿನದ ಅಮೆರಿಕಾ ಪ್ರವಾಸದಲ್ಲಿ ಇಂದು ಕೊನೆಯ ದಿನವಾಗಿದ್ದು, ಇಂದು ಸಂಜೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ತೆರಳಿ ಅಲ್ಲಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...