Homeಅಂತರಾಷ್ಟ್ರೀಯಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆಯಿಂದ ‘ಪ್ರಜಾಪ್ರಭುತ್ವ’ದ ಪಾಠ!

ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆಯಿಂದ ‘ಪ್ರಜಾಪ್ರಭುತ್ವ’ದ ಪಾಠ!

ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -
- Advertisement -

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆನಿಕೊಂಡಿರುವ ಭಾರತದ ಪ್ರಧಾನಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಪ್ರಜಾಪ್ರಭುತ್ವದ ಪಾಠ ಕೇಳುವಂತಾಗಿದ್ದು ದೇಶದ ಅತಿ ದೊಡ್ಡ ವಿಪರ್ಯಾಸ ಎಂದು ರಾಜ್ಯ ಕಾಂಗ್ರೆಸ್ ಶನಿವಾರ ಆಕ್ರೋಶ ವ್ಯಕ್ತಪಡಿಸಿದೆ.

ಮೂರು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶುಕ್ರವಾರ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು, ‘‘ವಿಶ್ವದೆಲ್ಲೆಡೆ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಇದನ್ನು ತಡೆಗಟ್ಟಲು, ನಮ್ಮ ದೇಶಗಳಲ್ಲಿ ಪ್ರಜಾಸತ್ತಾತ್ಮಕ ನೀತಿಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ರಕ್ಷಿಸಿಕೊಳ್ಳುವ ತುರ್ತು ಅಗತ್ಯವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

“ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವೆಲ್ಲಾ ಏನು ಮಾಡಬೇಕು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ದೇಶದ ಹಿತಾಸಕ್ತಿಗಾಗಿ ನಾವಿದನ್ನು ಮಾಡಲೇಬೇಕಿದೆ. ಪ್ರಜಾಪ್ರಭುತ್ವದ ಬಗ್ಗೆ ಭಾರತೀಯರ ಬದ್ಧತೆಯ ಬಗ್ಗೆ ಸ್ವತಃ ನನ್ನ ಕುಟುಂಬದವರನ್ನು ನೋಡಿ, ಅರ್ಥೈಸಿಕೊಂಡಿದ್ದೇನೆ. ಪ್ರಜಾಸತ್ತಾತ್ಮಕ ನೀತಿಗಳು ಮತ್ತು ಸಂಸ್ಥೆಗಳನ್ನು ಕಾಪಾಡಿಕೊಳ್ಳಲು ಏನೆಲ್ಲಾ ಮಾಡಬೇಕು ಎಂಬುದು ನನಗೆ ತಿಳಿದಿದೆ” ಎಂದು ಕಮಲಾ ಅವರು ಹೇಳಿದ್ದಾರೆ.

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರು ತಮಿಳುನಾಡಿನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರರಾಗಿದ್ದರು.

ಇದನ್ನೂ ಓದಿ: ಮೋದಿ ಪ್ರವಾಸ ವಿರೋಧಿಸಿ ವೈಟ್‌ ಹೌಸ್‌ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆ

ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್‌, ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ? ಎಂದು ಪ್ರಶ್ನಿಸಿದೆ.

ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಕಾಂಗ್ರೆಸ್, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆನಿಸಿಕೊಂಡಿದ್ದ ಭಾರತದ ಪ್ರಧಾನಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಪ್ರಜಾಪ್ರಭುತ್ವದ ಪಾಠ ಕೇಳುವಂತಾಗಿದ್ದು ದೇಶದ ಅತಿ ದೊಡ್ಡ ವಿಪರ್ಯಾಸ. ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ?” ಎಂದು ಕೇಳಿದೆ.

ಕಮಲಾ ಹ್ಯಾರಿಸ್ ಭೇಟಿಯ ನಂತರ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಜೊ ಬೈಡನ್‌ ‌ಅವರನ್ನು ಭೇಟಿಯಾದ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆಯ ನಂತರ ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಪ್ರಧಾನಿಯ ಮೂರು ದಿನದ ಅಮೆರಿಕಾ ಪ್ರವಾಸದಲ್ಲಿ ಇಂದು ಕೊನೆಯ ದಿನವಾಗಿದ್ದು, ಇಂದು ಸಂಜೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ತೆರಳಿ ಅಲ್ಲಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...