Homeಅಂಕಣಗಳುಇವರು ನಮ್ಮ ಪ್ರತಿನಿಧಿಗಳು ಮತ್ತು ನಾವು ಇಂತವರಿಗೆ ಪ್ರಭುಗಳು!

ಇವರು ನಮ್ಮ ಪ್ರತಿನಿಧಿಗಳು ಮತ್ತು ನಾವು ಇಂತವರಿಗೆ ಪ್ರಭುಗಳು!

- Advertisement -
- Advertisement -

ಅಂದು ಒಂದು ಬಿಸಿಗಾಳಿ ತುಂಬಿದ ಬಲೂನ್ ಕೆಳಗೆ ನಿಂತಿರುವ ಜನ ಕತ್ತೆತ್ತಿ ಅದರ ಹಾರಾಟವನ್ನು ನೋಡುತ್ತಿದ್ದರೆ. ಇಲ್ಲಿ ಅವರ ಜೇಬುಗಳಿಗೆ ಕತ್ತರಿ ಬೀಳುತ್ತಿರುತ್ತೆ. ಆ ಬಲೂನು ಐದು ವರ್ಷಗಳಿಗೊಮ್ಮೆ ಕೆಳಗಿಳಿದು ಬಂದು ಯಾರಾದರೂ ಒಳಕ್ಕೆ ಬರಬಹುದೆಂದು ಆಹ್ವಾನಿಸುತ್ತದೆ. ಆದರೆ ನಮ್ಮ ಜನರ್ಯಾರಿಗೂ ಆ ಸಾಮಥ್ರ್ಯವಿಲ್ಲದಿರುವುದರಿಂದ ಮತ್ತೆ ಹಳಬರನ್ನೇ ಹತ್ತಿಸಿಕೊಂಡು ಮೇಲಕ್ಕೆ ಹಾರುತ್ತದೆ. (ನಮ್ಮ ಜನರ ಜೇಬುಗಳಿಗೆ ಕತ್ತರಿ ಬೀಳುವುದಂತೂ ಮುಂದುವರೆಯುತ್ತದೆ)
ಇಲ್ಲಿ ಮಾತನಾಡುತ್ತಿರುವುದದು ಪ್ರಜಾತಂತ್ರ ವ್ಯವಸ್ಥೆಯ ಬಗ್ಗೆ ಎನ್ನುವುದು ಯಾರಿಗಾದರೂ ಅರ್ಥವಾಗುವಂತದ್ದು. ಈ ಮಾತುಗಳನ್ನು ಆಡಿರುವುದು ಇಪ್ಪತ್ತನೆಯ ಶತಮಾನದ ಮೊದಲ ಭಾಗದಲ್ಲಿದ್ದ ಪ್ರಮುಖ ಇಂಗ್ಲೀಷ್ ನಾಟಕಕಾರ ಜಾರ್ಜ್ ಬರ್ನಾರ್ಡ್ ಷಾ. 1930ರಲ್ಲಿ ಪ್ರಕಟವಾದ ತನ್ನ ‘ದಿ ಆಪಲ್ ಲಾಟ್’ ಎನ್ನುವ ವಿಡಂಬನಾ ನಾಟಕಕ್ಕೆ ತಾನೇ ಬರೆದ ಸುದೀರ್ಘ ಮುನ್ನುಡಿಯಲ್ಲಿ ಬ್ರಿಟಿಷ್ ಸಂಸದೀಯ ವ್ಯವಸ್ಥೆಯನ್ನು ಕುರಿತು ಆಡಿದ ಮಾತುಗಳಿವು.

ಜಾರ್ಜ್ ಬರ್ನಾರ್ಡ್ ಷಾ

ಇಪ್ಪತ್ತೊಂದನೆ ಶತಮಾನದ ಈ ದಿನಗಳಿಗೂ ಈ ಮಾತುಗಳು ಹೇಗೆ ಅನ್ವಯಿಸುತ್ತದೆ ಎನ್ನುವುದೇ ಸೋಜಿಗ. ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪಕ್ಷ ಸಿಕ್ಕ ಅಧಿಕಾರವನ್ನು ಹೇಗಾದರೂ ಮಾಡಿ ದಕ್ಕಿಸಿಕೊಳ್ಳಬೇಕೆಂದು ಉತ್ತರದಲ್ಲಿ ರಾಮನನ್ನು, ದಕ್ಷಿಣದಲ್ಲಿ ಅಯ್ಯಪ್ಪನನ್ನು ಬಳಸಿಕೊಳ್ಳುತ್ತಲೇ ಸಾಮಾನ್ಯ ಜನತೆಗೆ ತನ್ನ ದೇಶಪ್ರೇಮದ ಬಗ್ಗೆ ಮಂಕು ಬೂದಿ ಎರಚುತ್ತ ಚುನಾವಣೆಗಳ ಸಿದ್ದತೆಯಲ್ಲಿದೆ. ಜನರು ಇಂಥಾ ರಾಜಕಾರಣದ ಪ್ರಹಸನದ ಅಂಕಗಳನ್ನು ವೀಕ್ಷಿಸುತ್ತ ಮನರಂಜನೆ ಪಡೆಯುತ್ತಿದ್ದಾರೆ.
ಆ ನಾಯಕರು ತಾವು ಮಾತ್ರ ದೇಶಭಕ್ತರು ತಮ್ಮನು ವಿರೋಧಿಸುವವರು ದೇಶದ್ರೋಹಿಗಳು ಎಂದು ಬಿಂಬಿಸುತ್ತಾ ಆಗಾಗ ವೀರಾವೇಶದ ಮಾತುಗಳನ್ನೂ, ಆ ಮಾತುಗಳನ್ನಾಡುವ ಭರದಲ್ಲಿ ಹಾಸ್ಯಸ್ಪದ ಸುಳ್ಳುಗಳನ್ನೂ ಜನರಿಗೆ ಮೊಗೆಮೊಗೆದು ಹಂಚುತ್ತಿದ್ದಾರೆ. ಇದುವರೆಗು ಒಬ್ಬರ ವಿರುದ್ಧ ಒಬ್ಬರು ಕತ್ತಿಮಸೆಯುತ್ತಿದ್ದ ಆ ಪಕ್ಷದ ರಾಜಕೀಯ ವಿರೋಧಿಗಳು ಈಗ ಒಟ್ಟಾಗಿ ಕೈಕೈ ಜೋಡಿಸಿ ಮುಂದಿನ ಚುನಾವಣೆಗಳಲ್ಲಿ ಈ ಅಧಿಕಾರಸ್ಥರು ಧೂಳೀಪಟವಾಗುವುದರಲ್ಲಿ ಅನುಮಾನವಿಲ್ಲವೆಂದು ಡಂಗೂರ ಸಾರುತ್ತಿದ್ದಾರೆ.
ಇನ್ನ ರಾಜ್ಯ ಮಟ್ಟದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದೆ ಕ್ರುದ್ಧರಾದ ದೇಶಭಕ್ತ(!) ನಾಯಕರುಗಳು ಸರ್ಕಾರವನ್ನು ಹೇಗಾದರೂ ಬೀಳಿಸಿ ಗದ್ದುಗೆ ಏರಬೇಕೆಂದು ಹವಣಿಸಿ ಪ್ರಜಾಪ್ರಭುತ್ವವೇ ತಲೆತಗ್ಗಿಸುವಂತೆ ಆಡಬಾರದ ಆಟ ಆಡುತ್ತಿದ್ದಾರೆ. ಅದಕ್ಕಾಗಿ ಸಾಮ, ದಾನ, ಭೇದ, ದಂಡೋಪಾಯಗಳೆಲ್ಲವನ್ನು ಪ್ರಯೋಗಿಸುತ್ತಿದ್ದರೂ ಆ ಪ್ರಯತ್ನಗಳು ಕೈಗೂಡದೆ ಹತಾಶರಾಗಿದ್ದಾರೆ. ಇಂಥ ನಾಟಕದ ದೃಶ್ಯಗಳಲ್ಲಿ ಇದುವರಿಗೂ ರಾಜಕೀಯ ರಂಗದಿಂದಲೇ ಮಾಯವಾಗಿದ್ದ ಮಾಜಿ ಮುಖ್ಯಮಂತ್ರಿಗಳು, ಒಂದು ರಿಪಬ್ಲಿಕ್‍ನ ಧಣಿಗಳು ಮರು ಪ್ರವೇಶ ಮಾಡಲು ಹಾತೊರೆಯುತ್ತಿದ್ದಾರೆ. ಆಳುವ ಪಕ್ಷದ ಕೆಲವರು ತಾವು ಹುಟ್ಟಿರುವುದೇ ಮಂತ್ರಿಯಾಗಬೇಕೆಂದು ಅದಾಗದಿದ್ದರೆ ತಮಗೆ ಅಸ್ತಿತ್ವವಿಲ್ಲವೇನೋ ಎಂಬುವಂತೆ ನರಳಾಡುತ್ತಿದ್ದಾರೆ. ಮಂತ್ರಿಗಿರಿಗಾಗಿ ಎಲ್ಲ ರೀತಿಯ ತಿಪ್ಪರಲಾಗಗಳನ್ನೂ ಹಾಕುತ್ತಿದ್ದಾರೆ.
ಈ ನಾಟಕಗಳ ನಡುವೆ ಇವರನ್ನು ಆರಿಸಿದ ಜನ ಏನು ಮಾಡುತ್ತಿದ್ದಾರೆ? ಈ ಪ್ರಹಸನಗಳಲ್ಲಿ ಮೂಕಪ್ರೇಕ್ಷಕರಾಗಿರುವುದು ಬಿಟ್ಟರೆ ಬೇರೇನೂ ಪಾತ್ರವಿಲ್ಲ ಅವರಿಗೆ.
ಉತ್ತರ ಕರ್ನಾಟಕದ ಜನ ಕೆಲಸವನ್ನರಸಿ ಕಿಕ್ಕಿರಿದ ಬಸ್ಸು, ರೈಲು, ಟೆಂಪೋಗಳಲ್ಲಿ ದೂರದ ಊರುಗಳಿಗೆ ಹೊರಟರೆ ಅವರ ಪ್ರತಿನಿಧಿಗಳು ಐಷಾರಾಮಿ ಬಸ್ಸುಗಳಲ್ಲಿ ಪಂಚಾತಾರಾ ಹೊಟೇಲುಗಳು, ರೆಸಾರ್ಟುಗಳ ಕಡೆಗೆ ನುಗ್ಗುತ್ತಿದ್ದಾರೆ. ಸಾಮಾನ್ಯ ಜನರ ಜೇಬುಗಳಿಗೆ ಮಾತ್ರವಲ್ಲ ಅವರ ಜೀವಗಳಿಗೇ ಕತ್ತರಿ ಪೆಟ್ಟುಗಳು ಬೀಳುತ್ತಿದ್ದರೂ ನಮ್ಮದು ಮಹಾನ್ ಪ್ರಜಾಪ್ರಭುತ್ವವೆಂದು ಪರಾಕು ಹೇಳುವವರಿಗೇನು ಕಡಿಮೆ ಇಲ್ಲ.
ಇಂಥ ಪ್ರಭೃತಿಗಳ ಸಂಖ್ಯೆಯೇ ಹೆಚ್ಚಾಗಿರುವುದನ್ನು ನೋಡಿ ಮುನಿಸಿಕೊಂಡು ಮತದಾನವೇ ಮಾಡುವುದಿಲ್ಲ ಎನ್ನುವವರನ್ನು ಈ ಪರಾಕು ವೀರರು ನಾಲಾಯಕ್ಕುಗಳು ಎಂದು ಮೂದಲಿಸುತ್ತಾರೆ. ಹೌದು, ಮತದಾನ ನಮ್ಮೆಲ್ಲರ ಹಕ್ಕು ಮಾತ್ರವಲ್ಲ, ಕರ್ತವ್ಯವೂ ಹೌದು. ಸಮರ್ಥರನ್ನು ಆರಿಸಲು ಅದು ಅಸ್ತ್ರವೂ ಹೌದು. ಆದರೆ ಪ್ರಶ್ನೆಯೇನೆಂದರೆ ಯಾವ ಸಮರ್ಥರಿಗೆ ಯಾವ ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ. ಟಿಕೇಟು ವಿತರಣೆ ಎನ್ನುವುದೇ ದೊಡ್ಡ ದಂಧೆಯಾಗಿ ಹೋಗಿದೆ. ಸರಿ, ಆ ಅಸ್ತ್ರವನ್ನು ಬಳಸಿಕೊಂಡು ಮತದಾನ ಮಾಡಿದ್ದರಿಂದಲೇ ಅಲ್ಲವೇ ಈಗಿನ ಜನಪ್ರತಿನಿಧಿಗಳು ಆಯ್ಕೆಯಾಗಿರೋದು. ಹಾಗೆ ಆಯ್ಕೆಯಾದವರು ಮಾಡುತ್ತಿರುವುದೇನು? ಅದೇ ರೆಸಾರ್ಟ್ ರಾಜಕಾರಣ, ಅದೇ ಅಧಿಕಾರ ಹಪಾಹಪಿ, ಅದೇ ಕಾಲೆಳೆದಾಟ, ಅದೇ ಕೋಮುವಿಧ್ವಂಸ!
ಪ್ರಜೆಯೇ ಪ್ರಭು ಎನ್ನುತ್ತದೆ ನಮ್ಮ ಪ್ರಜಾಪ್ರಭುತ್ವ. ಆದರೆ ಯಾವತ್ತಾದರು ಪ್ರಜೆ ಪ್ರಭುವಾಗಿ ಹಕ್ಕು ಚಲಾಯಿಸುವ ಅವಕಾಶ ಕೂಡಿಬಂದಿದೆಯಾ? ಎಲೆಕ್ಷನ್ ಸಮಯದಲ್ಲೂ ಆತ ಹಣ, ಹೆಂಡದ ಋಣಕ್ಕೆ ವರ್ತಿಸಬೇಕಾದ ಪರಿಸ್ಥಿತಿಯನ್ನು ನಿರ್ಮಿಸಲಾಗಿದೆ. ಚುನಾವಣೆ ಅನ್ನುವುದೇನಿದ್ದರು ನಮ್ಮದಲ್ಲ, ಅದು ಆ ರಾಜಕಾರಣಿಗೂ ಈ ರಾಜಕಾರಣಿಗೂ ನಡುವೆ ನಡೆಯುವ ಭರ್ಜರಿ ಪೈಪೋಟಿ. ನಮ್ಮದೇನಿದ್ದರು ಆ ಪೈಪೋಟಿಯಲ್ಲಿ ಒಂದಷ್ಟು ಫಾಯಿದೆ ಮಾಡಿಕೊಂಡರೆ ಮುಗಿಯಿತು ಎನ್ನುವ ಮನಸ್ಥಿತಿಗಳಿಗೆ `ಮತದಾನ ನಮ್ಮ ಹಕ್ಕು’ ಎನ್ನುವ ಉಪದೇಶವೂ ನೋಟಿನ ರೂಪದಲ್ಲಿಯೇ ಕಾಣಿಸಿದರೂ ಅಚ್ಚರಿಯಿಲ್ಲ.
ಪ್ರಜಾಪ್ರಭುತ್ವ ಮತ್ತು ಮತದಾನದ ಸುತ್ತ ಇಂಥಾ ಚರ್ಚೆಗಳು ಶುರುವಾಗುತ್ತಿರೋದನ್ನು ಮತ್ತು ಅದು ಈಗಿರುವ ಭ್ರಷ್ಟ ರಾಜಕಾರಣ ವ್ಯವಸ್ಥೆಗೆ ಮಾರಕವಾಗಬಲ್ಲಷ್ಟು ಶಕ್ತವಾಗಿರುವುದನ್ನು ಸುಮ್ಮನಾಗಿಸಲು `ನೋಟಾ’ ಎನ್ನುವ ಲಾಲಿಪಪ್ಪನ್ನು ಜನರ ಕೈಗಿಡಲಾಗಿದೆ. ಅದು ಲಾಲಿಪಪ್ ಅಲ್ಲದೆ ಮತ್ತೇನೂ ಅಲ್ಲ. ಮತದಾನದ ವಿರುದ್ಧ ಮುನಿಸಿಕೊಂಡವರನ್ನು ತೆಪ್ಪಗಾಗಿಸುವ ತಂತ್ರದಂತೆ ಅದು ಬಳಕೆಯಾಗುತ್ತಿದೆ. ದೇಶದ ಇತಿಹಾಸದಲ್ಲೇ ಆ `ನೋಟಾ’ ರಾಜಕಾರಣಿಗಳ ಅಬ್ಬರದ ನಡುವೆ ಪ್ರಜೆಗಳನ್ನು ಹೀರೋ ಆಗಿಸಿದ ಒಂದೇಒಂದು ನಿದರ್ಶನವಿಲ್ಲ. ಆ ಕುರಿತು ಸ್ಪಷ್ಟ ಮಾರ್ಗಸೂಚಿಗಳು ಸರ್ಕಾರಗಳ ಬಳಿ ಇಲ್ಲ, ಜರನಲ್ಲಿ ಅವು ಜಾಗೃತಿಯನ್ನೂ ಮೂಡಿಸುತ್ತಿಲ್ಲ. `ಮತದಾನ ನಮ್ಮ ಹಕ್ಕು’ ಎನ್ನುವ ಮೂಲಕ ಪ್ರಸ್ತುತ ಚುನಾವಣಾ ವ್ಯವಸ್ಥೆಯ ವಿರುದ್ಧ ಜನರೊಳಗಿನ ಬಂಡಾಯ ಪ್ರಜ್ಞೆಯನ್ನು ಹತ್ತಿಕ್ಕುವ ಪ್ರಯತ್ನ ಒಂದು ಹುನ್ನಾರಕ್ಕಿಂತ ಕಡಿಮೆಯೇನಿಲ್ಲ ಅನಿಸುತ್ತದೆ.
ಅಪರೂಪಕ್ಕೆ ಯಾರಾದರೂ ಪ್ರಾಮಾಣಿಕರು ಸ್ವರ್ಧಿಸಿದರೆ ಅವರಿಗೆ ನೂರೋ, ಇನ್ನೂರೊ, ಹೆಚ್ಚೆಂದರೆ ಕೆಲವು ಸಾವಿರವೋ ಮತಗಳು ಮಾತ್ರ ಬೀಳುತ್ತವೆ. ಎಷ್ಟೋ ಕಡೆ ಈ ಪ್ರಾಮಾಣಿಕರಿಗಿಂತ `ನೋಟಾ’ ಮತಗಳೇ ಹೆಚ್ಚಿರುತ್ತವೆ. ಹಾಗಾದರೆ ಈ `ನೋಟಾ’ ಏನನ್ನು ಸಾಧಿಸಹೊರಟಿದೆ? ಅನ್ನೋ ಪ್ರಶ್ನೆಯನ್ನು ಕೇಳಿಕೊಳ್ಳಲೇಬೇಕು. ಇದು ಕೇವಲ ಚುನಾವಣೆಯ ಸಂಗತಿ ಅಷ್ಟೇ. ಜನರನ್ನು ಹೀಗೆ `ನೈತಿಕ’ ನೆಪಗಳ ಮೂಲಕವೇ ಧ್ವಂಸ ಮಾಡಲು ಈ ರಾಜಕಾರಣಿಗಳು ಹಲವು ದಾರಿಗಳನ್ನು ಕಂಡುಕೊಂಡಿದ್ದಾರೆ.
ಅದೇ ಕಾರಣಕ್ಕೆ `ಪ್ರಜಾಪ್ರಭುತ್ವ ಲೊಳಲೊಟ್ಟೆ’ ಎನ್ನುವ ಮಾತು ಈಗಾಗಲೇ ಜನರ ನಡುವೆ ಪ್ರಚಲಿತವಾಗಿದೆ. ಅಪ್ಪಿತಪ್ಪಿ ಈ ಮಾತು ನಿಜವಾಗಿಬಿಟ್ಟರೆ ದೇಶ ಹಲವು ಶತಮಾನಗಳ ಆಳಕ್ಕೆ ಕುಸಿಯುವುದರಲ್ಲಿ ಸಂಶಯವಿಲ್ಲ. ಹಾಗಾಗಿ ‘ನಾವು ದೇಶಕ್ಕಾಗಿ’ ಎದ್ದು ನಿಂತು ಸುಳ್ಳುರನ್ನೂ ಭ್ರಷ್ಟರನ್ನೂ ಮೂಲೆಗೆ ತಳ್ಳಿ ನಿಜವಾದ ಪ್ರಜಾತಂತ್ರದ ಸ್ಥಾಪನೆಗೆ ಕೈ ಹಾಕಬೇಕಿದೆ. ಆ ದಿಕ್ಕಿನಲ್ಲಿ ಯುವಜನರ ಪಾತ್ರ ದೊಡ್ಡದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...