Homeಮುಖಪುಟ‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಜಮ್ಮು ಕಾಶ್ಮೀರದಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದ್ದು, ಡೆಮಾಕ್ರಟಿಕ್ ಆಜಾದ್ ಪಕ್ಷ (ಡಿಎಪಿ) ಎಂದು ಹೆಸರಿಟ್ಟಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅವರು ಆಗಸ್ಟ್ 26 ರಂದು ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಸುದೀರ್ಘ ಒಡನಾಟವನ್ನು ಕೊನೆಗೊಳಿಸಿದ್ದರು.

ತಮ್ಮ ಪಕ್ಷಕ್ಕೆ ಡೆಮಾಕ್ರಟಿಕ್ ಆಜಾದ್ ಪಾರ್ಟಿ (ಡಿಎಪಿ) ಎಂದು ಹೆಸರಿಟ್ಟಿರುವುದಾಗಿ ಹೇಳಿರುವ ಅವರು, “ಇದು ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ಯ್ರ ಮತ್ತು ಚಿಂತನೆಯ ಸ್ವಾತಂತ್ರ್ಯವನ್ನು ಸಂಕೇತಿಸುತ್ತದೆ. ನಮ್ಮ ಸಿದ್ಧಾಂತವು ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಆದರ್ಶಗಳನ್ನು ಆಧರಿಸಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಎಪಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸ್ಪರ್ಧೆಯನ್ನು ಹೊಂದಿಲ್ಲ. ಜಮ್ಮು ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜತೆಯನ್ನು ‘ಬಲಪಡಿಸುವ’ ಕಡೆಗೆ ಪಕ್ಷದ ಗಮನವು ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ 370ನೇ ವಿಧಿಗಾಗಿ ಪ್ರಜಾಸತ್ತಾತ್ಮಕ ಹೋರಾಟ ಮುಂದುವರೆಸುತ್ತೇವೆ: ಒಮರ್ ಅಬ್ದುಲ್ಲಾ ಪ್ರತಿಜ್ಞೆ

ಪಕ್ಷವು ನಿರಂಕುಶ ಪಕ್ಷವಾಗಿರದೆ ಪ್ರಜಾಸತ್ತಾತ್ಮಕವಾಗಿರುತ್ತದೆ ಎಂದು ಅವರು ಹೇಳಿದ್ದು, “ಡಿಎಪಿ ಪ್ರಜಾಪ್ರಭುತ್ವದ ತತ್ವಗಳನ್ನು ಆಧರಿಸಿದೆ. ಇದು ಯಾವುದೇ ಹೊರಗಿನ ನಾಯಕ ಅಥವಾ ಇತರ ಪಕ್ಷಗಳಿಂದ ಪ್ರಭಾವಿತವಾಗುವುದಿಲ್ಲ. ಅದು ಸ್ವತಂತ್ರ ಚಿಂತನೆಯನ್ನು ಹೊಂದಿರುತ್ತದೆ ಮತ್ತು ತನ್ನ ನಿರ್ಧಾರಗಳಲ್ಲಿ ಸ್ವತಂತ್ರವಾಗಿರುತ್ತದೆ. ಅದು ನಿರಂಕುಶವಾಗಿರುವುದಿಲ್ಲ ಮತ್ತು ಅಧಿಕಾರವು ಒಬ್ಬರ ಕೈಯಲ್ಲಿ ಇರುವುದಿಲ್ಲ” ಎಂದು ಹೇಳಿದ್ದಾರೆ.

“ಡಿಎಪಿ ತನ್ನ ರಚನೆಗಾಗಿ ತಳಮಟ್ಟದ ಚುನಾವಣೆಗಳನ್ನು ನಡೆಸುತ್ತದೆ. ನಾವು ನಮ್ಮ ಮಟ್ಟದಲ್ಲಿ ಸ್ಪರ್ಧಿಸಲಿದ್ದೇವೆ. ನಮಗೆ ಯಾವುದೇ ಶತ್ರುತ್ವ ಅಥವಾ ಶತ್ರುಗಳಿಲ್ಲ. 50% ಟಿಕೆಟ್ಗಳನ್ನು ಯುವಕರಿಗೆ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಪಕ್ಷದ ಧ್ವಜದ ಹಳದಿ, ಬಿಳಿ ಮತ್ತು ಕಡು ನೀಲಿ ಬಣ್ಣದ ಕುರಿತು ಮಾತನಾಡಿದ ಅವರು, “ಗಾಢ ಹಳದಿ ಬಣ್ಣವು ಸೃಜನಶೀಲತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯನ್ನು ಸೂಚಿಸುತ್ತದೆ. ಬಿಳಿ ಶಾಂತಿಯನ್ನು ಮತ್ತು ನೀಲಿ ಬಣ್ಣವು ಸ್ವಾತಂತ್ರ್ಯ, ಮುಕ್ತ ಆಕಾಶ, ಮುಕ್ತ ಕಲ್ಪನೆ ಮತ್ತು ಸಮುದ್ರದಿಂದ ಆಕಾಶದ ಎತ್ತರದವರೆಗಿನ ಮಿತಿಗಳನ್ನು ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ತಮ್ಮ ಉಪನಾಮ ಆಜಾದ್‌ಗೂ ಪಕ್ಷದ ಹೆಸರಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯೊಂದಿಗೆ ಮೊದಲೇ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಆರೋಪಗಳ ಕುರಿತು ಮಾತನಾಡಿದ ಅವರು,“ತಾನು ಅಥವಾ ತನ್ನ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಹೊಂದಿಲ್ಲ. ಪಕ್ಷವು ಜಮ್ಮು ಕಾಶ್ಮೀರದ ಜನರ ಹೃದಯದೊಂದಿಗೆ ಮಾತ್ರ ಮೈತ್ರಿ ಮಾಡಿಕೊಂಡಿದೆ. ಪಕ್ಷ ಆರಂಭಿಸುವ ಮುನ್ನ ನಾವು ಯಾರನ್ನೂ ಸಂಪರ್ಕಿಸಿಲ್ಲ” ಎಂದು ಹೇಳಿದ್ದಾರೆ.

ಡಿಎಪಿ ನೀತಿಯು ಯಾವುದೆ ಧರ್ಮದ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದು ಹೇಳಿದ ಅವರು, “ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ನರು ಮಾನವ ಹೃದಯದ ನಾಲ್ಕು ಕೋಣೆಗಳು. ಪಕ್ಷದ ಹೆಸರು ಹಿಂದೂಸ್ತಾನಿ ಆಗಿದೆ. ನಮ್ಮ ಮನೆಗಳಲ್ಲಿ ಮಾತನಾಡುವ ಉರ್ದು ಮತ್ತು ಹಿಂದೂಗಳ ಮಿಶ್ರಣವನ್ನು ಹಿಂದೂಸ್ತಾನಿ ಎಂದು ಜವಾಹರಲಾಲ್ ನೆಹರು ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

ಆರ್ಟಿಕಲ್ 370ರ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ವಿಧಿಯನ್ನು ಪುನಃಸ್ಥಾಪಿಸುವುದಿಲ್ಲ ಎಂದು ನಾನು ಎಂದಿಗೂ ಹೇಳಲಿಲ್ಲ. ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನು ಯಾರಾದರೂ ಮನವೊಲಿಸಿದರೆ ಅದನ್ನು ಬದಲಾಯಿಸಬಹುದು. ಸದ್ಯ ನನಗೆ ಅಂತಹ ಶಕ್ತಿ ಇಲ್ಲದಿರುವುದರಿಂದ ನಾನು ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಅವರು ಈ ಹಿಂದೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಶಾಶ್ವತವಾಗಿ ಮರುಸ್ಥಾಪಿಸಲು ಸಾಧ್ಯತೆಯಿಲ್ಲ ಎಂದು ಎಂದು ಹೇಳಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆಯುವ ಅದೇ ಸಮದಯಲ್ಲಿ, ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ ಎರಡು ಡಜನ್ ಪ್ರಮುಖ ನಾಯಕರು ಅವರನ್ನು ಅನುಸರಿಸಿದ್ದರು.

“ಭಾರತಕ್ಕೆ ಯಾವುದು ಸರಿ ಎಂದು ಹೋರಾಡಲು ಎಐಸಿಸಿಯನ್ನು ನಡೆಸುವ ಕೂಟದ ಮಾರ್ಗದರ್ಶನದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಚ್ಛೆ ಮತ್ತು ಸಾಮರ್ಥ್ಯ ಎರಡನ್ನೂ ಕಳೆದುಕೊಂಡಿದೆ” ಎಂದು ಅವರು ಸೋನಿಯಾ ಗಾಂಧಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಹೊಸ ಪಕ್ಷದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜಕೀಯ ವಿಶ್ಲೇಷಕರೊಬ್ಬರು,“ಗುಲಾಂ ನಬಿ ಆಝಾದ್ ಅವರು ಬಿಜೆಪಿಯ ಕೈಗೊಂಬೆ ಎಂಬುವುದು ಇಲ್ಲಿವರೆ ಜಮ್ಮು ಕಾಶ್ಮೀರ ಸೇರಿದಂತೆ ಎಲ್ಲರಿಗೂ ತಿಳಿದದೆ. ಇದೆಲ್ಲಾ ಬಿಜೆಪಿಯ ನಿರೀಕ್ಷಿತ ಕಡೆ. ಜಮ್ಮು ಕಾಶ್ಮೀರದಲ್ಲಿ ಡಿಲಿಮಿಟೇಷನ್ ಮಾಡಿರುವುದರಿಂದ ಜಮ್ಮುವಿನಲ್ಲಿ ಹೆಚ್ಚಿನ ಸ್ಥಾನಗಳು ಬಿಜೆಪಿಗೆ ಬರುತ್ತವೆ ಎಂದು ನಿರೀಕ್ಷಿಸಲಾಗುತ್ತಿದೆ. ಬಿಜೆಪಿ ಹಿಡಿತವಿಲ್ಲದ ಕಾಶ್ಮೀರದಲ್ಲಿ ಕೂಡಾ ಕೆಲವು ಸ್ಥಾನಗಳನ್ನು ಹೊಸ ಪಕ್ಷ ಪಡೆದರೆ ಅಲ್ಲಿ ಬಿಜೆಪಿ ಹಿಡಿತ ಸಾಧಿಸಬಹುದು ಎಂದು ಅವರ ಯೋಜನೆ. ಆದರೆ ಗುಲಾಂ ನಬಿ ಅವರನ್ನು ಜನರು ನೋಡಿಕೊಂಡೆ ಬಂದಿರುವುದರಿಂದ ಉಳಿದ ತೀರ್ಮಾನ ಅವರಿಗೆ ಬಿಟ್ಟಿದ್ದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...