Homeಮುಖಪುಟ‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಜಮ್ಮು ಕಾಶ್ಮೀರದಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದ್ದು, ಡೆಮಾಕ್ರಟಿಕ್ ಆಜಾದ್ ಪಕ್ಷ (ಡಿಎಪಿ) ಎಂದು ಹೆಸರಿಟ್ಟಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅವರು ಆಗಸ್ಟ್ 26 ರಂದು ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಸುದೀರ್ಘ ಒಡನಾಟವನ್ನು ಕೊನೆಗೊಳಿಸಿದ್ದರು.

ತಮ್ಮ ಪಕ್ಷಕ್ಕೆ ಡೆಮಾಕ್ರಟಿಕ್ ಆಜಾದ್ ಪಾರ್ಟಿ (ಡಿಎಪಿ) ಎಂದು ಹೆಸರಿಟ್ಟಿರುವುದಾಗಿ ಹೇಳಿರುವ ಅವರು, “ಇದು ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ಯ್ರ ಮತ್ತು ಚಿಂತನೆಯ ಸ್ವಾತಂತ್ರ್ಯವನ್ನು ಸಂಕೇತಿಸುತ್ತದೆ. ನಮ್ಮ ಸಿದ್ಧಾಂತವು ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಆದರ್ಶಗಳನ್ನು ಆಧರಿಸಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಎಪಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸ್ಪರ್ಧೆಯನ್ನು ಹೊಂದಿಲ್ಲ. ಜಮ್ಮು ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜತೆಯನ್ನು ‘ಬಲಪಡಿಸುವ’ ಕಡೆಗೆ ಪಕ್ಷದ ಗಮನವು ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ 370ನೇ ವಿಧಿಗಾಗಿ ಪ್ರಜಾಸತ್ತಾತ್ಮಕ ಹೋರಾಟ ಮುಂದುವರೆಸುತ್ತೇವೆ: ಒಮರ್ ಅಬ್ದುಲ್ಲಾ ಪ್ರತಿಜ್ಞೆ

ಪಕ್ಷವು ನಿರಂಕುಶ ಪಕ್ಷವಾಗಿರದೆ ಪ್ರಜಾಸತ್ತಾತ್ಮಕವಾಗಿರುತ್ತದೆ ಎಂದು ಅವರು ಹೇಳಿದ್ದು, “ಡಿಎಪಿ ಪ್ರಜಾಪ್ರಭುತ್ವದ ತತ್ವಗಳನ್ನು ಆಧರಿಸಿದೆ. ಇದು ಯಾವುದೇ ಹೊರಗಿನ ನಾಯಕ ಅಥವಾ ಇತರ ಪಕ್ಷಗಳಿಂದ ಪ್ರಭಾವಿತವಾಗುವುದಿಲ್ಲ. ಅದು ಸ್ವತಂತ್ರ ಚಿಂತನೆಯನ್ನು ಹೊಂದಿರುತ್ತದೆ ಮತ್ತು ತನ್ನ ನಿರ್ಧಾರಗಳಲ್ಲಿ ಸ್ವತಂತ್ರವಾಗಿರುತ್ತದೆ. ಅದು ನಿರಂಕುಶವಾಗಿರುವುದಿಲ್ಲ ಮತ್ತು ಅಧಿಕಾರವು ಒಬ್ಬರ ಕೈಯಲ್ಲಿ ಇರುವುದಿಲ್ಲ” ಎಂದು ಹೇಳಿದ್ದಾರೆ.

“ಡಿಎಪಿ ತನ್ನ ರಚನೆಗಾಗಿ ತಳಮಟ್ಟದ ಚುನಾವಣೆಗಳನ್ನು ನಡೆಸುತ್ತದೆ. ನಾವು ನಮ್ಮ ಮಟ್ಟದಲ್ಲಿ ಸ್ಪರ್ಧಿಸಲಿದ್ದೇವೆ. ನಮಗೆ ಯಾವುದೇ ಶತ್ರುತ್ವ ಅಥವಾ ಶತ್ರುಗಳಿಲ್ಲ. 50% ಟಿಕೆಟ್ಗಳನ್ನು ಯುವಕರಿಗೆ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಪಕ್ಷದ ಧ್ವಜದ ಹಳದಿ, ಬಿಳಿ ಮತ್ತು ಕಡು ನೀಲಿ ಬಣ್ಣದ ಕುರಿತು ಮಾತನಾಡಿದ ಅವರು, “ಗಾಢ ಹಳದಿ ಬಣ್ಣವು ಸೃಜನಶೀಲತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯನ್ನು ಸೂಚಿಸುತ್ತದೆ. ಬಿಳಿ ಶಾಂತಿಯನ್ನು ಮತ್ತು ನೀಲಿ ಬಣ್ಣವು ಸ್ವಾತಂತ್ರ್ಯ, ಮುಕ್ತ ಆಕಾಶ, ಮುಕ್ತ ಕಲ್ಪನೆ ಮತ್ತು ಸಮುದ್ರದಿಂದ ಆಕಾಶದ ಎತ್ತರದವರೆಗಿನ ಮಿತಿಗಳನ್ನು ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ತಮ್ಮ ಉಪನಾಮ ಆಜಾದ್‌ಗೂ ಪಕ್ಷದ ಹೆಸರಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯೊಂದಿಗೆ ಮೊದಲೇ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಆರೋಪಗಳ ಕುರಿತು ಮಾತನಾಡಿದ ಅವರು,“ತಾನು ಅಥವಾ ತನ್ನ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಹೊಂದಿಲ್ಲ. ಪಕ್ಷವು ಜಮ್ಮು ಕಾಶ್ಮೀರದ ಜನರ ಹೃದಯದೊಂದಿಗೆ ಮಾತ್ರ ಮೈತ್ರಿ ಮಾಡಿಕೊಂಡಿದೆ. ಪಕ್ಷ ಆರಂಭಿಸುವ ಮುನ್ನ ನಾವು ಯಾರನ್ನೂ ಸಂಪರ್ಕಿಸಿಲ್ಲ” ಎಂದು ಹೇಳಿದ್ದಾರೆ.

ಡಿಎಪಿ ನೀತಿಯು ಯಾವುದೆ ಧರ್ಮದ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದು ಹೇಳಿದ ಅವರು, “ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ನರು ಮಾನವ ಹೃದಯದ ನಾಲ್ಕು ಕೋಣೆಗಳು. ಪಕ್ಷದ ಹೆಸರು ಹಿಂದೂಸ್ತಾನಿ ಆಗಿದೆ. ನಮ್ಮ ಮನೆಗಳಲ್ಲಿ ಮಾತನಾಡುವ ಉರ್ದು ಮತ್ತು ಹಿಂದೂಗಳ ಮಿಶ್ರಣವನ್ನು ಹಿಂದೂಸ್ತಾನಿ ಎಂದು ಜವಾಹರಲಾಲ್ ನೆಹರು ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

ಆರ್ಟಿಕಲ್ 370ರ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ವಿಧಿಯನ್ನು ಪುನಃಸ್ಥಾಪಿಸುವುದಿಲ್ಲ ಎಂದು ನಾನು ಎಂದಿಗೂ ಹೇಳಲಿಲ್ಲ. ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನು ಯಾರಾದರೂ ಮನವೊಲಿಸಿದರೆ ಅದನ್ನು ಬದಲಾಯಿಸಬಹುದು. ಸದ್ಯ ನನಗೆ ಅಂತಹ ಶಕ್ತಿ ಇಲ್ಲದಿರುವುದರಿಂದ ನಾನು ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಅವರು ಈ ಹಿಂದೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಶಾಶ್ವತವಾಗಿ ಮರುಸ್ಥಾಪಿಸಲು ಸಾಧ್ಯತೆಯಿಲ್ಲ ಎಂದು ಎಂದು ಹೇಳಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆಯುವ ಅದೇ ಸಮದಯಲ್ಲಿ, ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ ಎರಡು ಡಜನ್ ಪ್ರಮುಖ ನಾಯಕರು ಅವರನ್ನು ಅನುಸರಿಸಿದ್ದರು.

“ಭಾರತಕ್ಕೆ ಯಾವುದು ಸರಿ ಎಂದು ಹೋರಾಡಲು ಎಐಸಿಸಿಯನ್ನು ನಡೆಸುವ ಕೂಟದ ಮಾರ್ಗದರ್ಶನದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಚ್ಛೆ ಮತ್ತು ಸಾಮರ್ಥ್ಯ ಎರಡನ್ನೂ ಕಳೆದುಕೊಂಡಿದೆ” ಎಂದು ಅವರು ಸೋನಿಯಾ ಗಾಂಧಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಹೊಸ ಪಕ್ಷದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜಕೀಯ ವಿಶ್ಲೇಷಕರೊಬ್ಬರು,“ಗುಲಾಂ ನಬಿ ಆಝಾದ್ ಅವರು ಬಿಜೆಪಿಯ ಕೈಗೊಂಬೆ ಎಂಬುವುದು ಇಲ್ಲಿವರೆ ಜಮ್ಮು ಕಾಶ್ಮೀರ ಸೇರಿದಂತೆ ಎಲ್ಲರಿಗೂ ತಿಳಿದದೆ. ಇದೆಲ್ಲಾ ಬಿಜೆಪಿಯ ನಿರೀಕ್ಷಿತ ಕಡೆ. ಜಮ್ಮು ಕಾಶ್ಮೀರದಲ್ಲಿ ಡಿಲಿಮಿಟೇಷನ್ ಮಾಡಿರುವುದರಿಂದ ಜಮ್ಮುವಿನಲ್ಲಿ ಹೆಚ್ಚಿನ ಸ್ಥಾನಗಳು ಬಿಜೆಪಿಗೆ ಬರುತ್ತವೆ ಎಂದು ನಿರೀಕ್ಷಿಸಲಾಗುತ್ತಿದೆ. ಬಿಜೆಪಿ ಹಿಡಿತವಿಲ್ಲದ ಕಾಶ್ಮೀರದಲ್ಲಿ ಕೂಡಾ ಕೆಲವು ಸ್ಥಾನಗಳನ್ನು ಹೊಸ ಪಕ್ಷ ಪಡೆದರೆ ಅಲ್ಲಿ ಬಿಜೆಪಿ ಹಿಡಿತ ಸಾಧಿಸಬಹುದು ಎಂದು ಅವರ ಯೋಜನೆ. ಆದರೆ ಗುಲಾಂ ನಬಿ ಅವರನ್ನು ಜನರು ನೋಡಿಕೊಂಡೆ ಬಂದಿರುವುದರಿಂದ ಉಳಿದ ತೀರ್ಮಾನ ಅವರಿಗೆ ಬಿಟ್ಟಿದ್ದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...