Homeಅಂತರಾಷ್ಟ್ರೀಯಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ಒಬಾಮಾ ಆಡಳಿತದ ಭಾಗವಾಗಿದ್ದ ಸೋನಾಲ್ ಷಾ ಮತ್ತು ಅಮಿತ್ ಜಾನಿ ಅವರರನ್ನು ಬೈಡನ್ ನಾಮನಿರ್ದೇಶಿತ ಭಾರತೀಯ-ಅಮೆರಿಕನ್ನರ ಪಟ್ಟಿಗೆ ಸೇರಿಸಿಲ್ಲ.

- Advertisement -
- Advertisement -

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತದಲ್ಲಿ ಪ್ರಮುಖ ಸ್ಥಾನಗಳಿಗೆ 13 ಮಹಿಳೆಯರು ಸೇರಿದಂತೆ ಸುಮಾರು 20 ಭಾರತೀಯ-ಅಮೆರಿಕನ್ನರನ್ನು ನಾಮನಿರ್ದೇಶನ ಮಾಡಿದ್ದಾರೆ. ಆದರೆ ಬೈಡನ್ ಪರ ಅಭಿಯಾನದಲ್ಲಿ ಕೆಲಸ ಮಾಡಿದ್ದರೂ ಸಹ ಆರ್‌ಎಸ್‌ಎಸ್-ಬಿಜೆಪಿ ಸಂಪರ್ಕ ಹೊಂದಿರುವವರನ್ನು ಆ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಮುಖ್ಯವಾಗಿ ಒಬಾಮಾ ಆಡಳಿತದ ಭಾಗವಾಗಿದ್ದ ಸೋನಾಲ್ ಷಾ ಮತ್ತು ಅಮಿತ್ ಜಾನಿ ಅವರರನ್ನು ಬೈಡನ್ ನಾಮನಿರ್ದೇಶಿತ ಭಾರತೀಯ-ಅಮೆರಿಕನ್ನರ ಪಟ್ಟಿಗೆ ಸೇರಿಸಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಯೊಂದಿಗಿನ ಸಂಪರ್ಕ ಹೊಂದಿದ್ದರು ಎಂದು ಹಲವು ಸಂಘಟನೆಗಳು ದೂರಿರುವುದೇ ಅವರನ್ನು ಹೊರಗಿಡಲು ಪ್ರಮುಖ ಕಾರಣ ಎಂದು ವರದಿ ತಿಳಿಸಿದೆ.

ಬಿಡೆನ್ ಅವರ ಏಕತೆ ಕಾರ್ಯಪಡೆಯಲ್ಲಿ ಸೇವೆ ಸಲ್ಲಿಸಿರುವ ಸೋನಾಲ್ ಷಾ ಅವರ ತಂದೆ ಬಿಜೆಪಿ-ಯುಎಸ್ಎಯ ಸಾಗರೋತ್ತರ ಸಂಘದ ಅಧ್ಯಕ್ಷರಾಗಿದ್ದರು ಮತ್ತು ಆರ್‌ಎಸ್‌ಎಸ್ ನಡೆಸುತ್ತಿರುವ ಏಕಲ್ ವಿದ್ಯಾಲಯದ ಸ್ಥಾಪಕರಾಗಿದ್ದಾರೆ. ಅಲ್ಲದೆ ಏಕಲ್ ವಿದ್ಯಾಲಯಕ್ಕಾಗಿ ಸೋನಾಲ್ ಷಾ ಹಣವನ್ನು ಸಂಗ್ರಹಿಸಿದ್ದಾರೆ ಎಂಬ ಆರೋಪವಿದೆ.

ಜಾನಿ ಅವರು ‘ನೇಮ್ ಬಿಡೆನ್’ ಅಭಿಯಾನದ ‘ಮುಸ್ಲಿಂ ಔಟ್‌ರೀಚ್‌ನ’ ಸಂಯೋಜಕರಾಗಿದ್ದರು. ಆದರೆ ಅವರ ಕುಟುಂಬಕ್ಕೆ ಪಿಎಂ ಮೋದಿ ಮತ್ತು ಇತರ ಬಿಜೆಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್-ಬಿಜೆಪಿ ಸಂಬಂಧ ಹೊಂದಿರುವವರು ಬಿಡೆನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಏಕೆಂದರೆ ಜಾತ್ಯತೀತ ಭಾರತೀಯ-ಅಮೆರಿಕನ್ ಸಂಸ್ಥೆಗಳು ಅಂತಹ ವ್ಯಕ್ತಿಗಳನ್ನು ಬದಿಗೆ ಸರಿಸುವಂತೆ ಬೈಡನ್ ಅವರ ಪರಿವರ್ತನಾ ತಂಡವನ್ನು ಸತತವಾಗಿ ಒತ್ತಾಯಿಸಿವೆ ಎನ್ನಲಾಗಿದೆ.

ಇದಕ್ಕೆ ವ್ಯತಿರಿಕ್ತವಾಗಿ ದೇವಯಾನಿ ಖೋಬರ್‌ಗಡೆ ಪ್ರಕರಣದಲ್ಲಿ ಪಾತ್ರವಹಿಸಿದ್ದ ಹಿರಿಯ ರಾಜತಾಂತ್ರಿಕ ಉಜ್ರಾ ಜಯಾ ಅಥವಾ ಸಿಎಎ, ಎನ್‌ಆರ್‌ಸಿ ಮತ್ತು ಕಾಶ್ಮೀರ ಲಾಕ್‌ಡೌನ್ ವಿರುದ್ಧ ಯುಎಸ್‌ನಲ್ಲಿ ಪ್ರತಿಭಟನಾ ರ್ಯಾಲಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಸಮೀರಾ ಫಾಜಿಲಿ ಅವರಂತಹ ವ್ಯಕ್ತಿಗಳನ್ನು ಬಿಡೆನ್ ತಂಡ ಹೊಂದಿದೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.


ಇದನ್ನೂ ಓದಿ: ಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. America is not like India, they wouldn’t take decisions based on the allegations, but based on the materialistic evidence. That is the reason America is world strong democracy.

    India is just a country of sentimental fools.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...