Homeಅಂತರಾಷ್ಟ್ರೀಯಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ಒಬಾಮಾ ಆಡಳಿತದ ಭಾಗವಾಗಿದ್ದ ಸೋನಾಲ್ ಷಾ ಮತ್ತು ಅಮಿತ್ ಜಾನಿ ಅವರರನ್ನು ಬೈಡನ್ ನಾಮನಿರ್ದೇಶಿತ ಭಾರತೀಯ-ಅಮೆರಿಕನ್ನರ ಪಟ್ಟಿಗೆ ಸೇರಿಸಿಲ್ಲ.

- Advertisement -
- Advertisement -

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತದಲ್ಲಿ ಪ್ರಮುಖ ಸ್ಥಾನಗಳಿಗೆ 13 ಮಹಿಳೆಯರು ಸೇರಿದಂತೆ ಸುಮಾರು 20 ಭಾರತೀಯ-ಅಮೆರಿಕನ್ನರನ್ನು ನಾಮನಿರ್ದೇಶನ ಮಾಡಿದ್ದಾರೆ. ಆದರೆ ಬೈಡನ್ ಪರ ಅಭಿಯಾನದಲ್ಲಿ ಕೆಲಸ ಮಾಡಿದ್ದರೂ ಸಹ ಆರ್‌ಎಸ್‌ಎಸ್-ಬಿಜೆಪಿ ಸಂಪರ್ಕ ಹೊಂದಿರುವವರನ್ನು ಆ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಮುಖ್ಯವಾಗಿ ಒಬಾಮಾ ಆಡಳಿತದ ಭಾಗವಾಗಿದ್ದ ಸೋನಾಲ್ ಷಾ ಮತ್ತು ಅಮಿತ್ ಜಾನಿ ಅವರರನ್ನು ಬೈಡನ್ ನಾಮನಿರ್ದೇಶಿತ ಭಾರತೀಯ-ಅಮೆರಿಕನ್ನರ ಪಟ್ಟಿಗೆ ಸೇರಿಸಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಯೊಂದಿಗಿನ ಸಂಪರ್ಕ ಹೊಂದಿದ್ದರು ಎಂದು ಹಲವು ಸಂಘಟನೆಗಳು ದೂರಿರುವುದೇ ಅವರನ್ನು ಹೊರಗಿಡಲು ಪ್ರಮುಖ ಕಾರಣ ಎಂದು ವರದಿ ತಿಳಿಸಿದೆ.

ಬಿಡೆನ್ ಅವರ ಏಕತೆ ಕಾರ್ಯಪಡೆಯಲ್ಲಿ ಸೇವೆ ಸಲ್ಲಿಸಿರುವ ಸೋನಾಲ್ ಷಾ ಅವರ ತಂದೆ ಬಿಜೆಪಿ-ಯುಎಸ್ಎಯ ಸಾಗರೋತ್ತರ ಸಂಘದ ಅಧ್ಯಕ್ಷರಾಗಿದ್ದರು ಮತ್ತು ಆರ್‌ಎಸ್‌ಎಸ್ ನಡೆಸುತ್ತಿರುವ ಏಕಲ್ ವಿದ್ಯಾಲಯದ ಸ್ಥಾಪಕರಾಗಿದ್ದಾರೆ. ಅಲ್ಲದೆ ಏಕಲ್ ವಿದ್ಯಾಲಯಕ್ಕಾಗಿ ಸೋನಾಲ್ ಷಾ ಹಣವನ್ನು ಸಂಗ್ರಹಿಸಿದ್ದಾರೆ ಎಂಬ ಆರೋಪವಿದೆ.

ಜಾನಿ ಅವರು ‘ನೇಮ್ ಬಿಡೆನ್’ ಅಭಿಯಾನದ ‘ಮುಸ್ಲಿಂ ಔಟ್‌ರೀಚ್‌ನ’ ಸಂಯೋಜಕರಾಗಿದ್ದರು. ಆದರೆ ಅವರ ಕುಟುಂಬಕ್ಕೆ ಪಿಎಂ ಮೋದಿ ಮತ್ತು ಇತರ ಬಿಜೆಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್-ಬಿಜೆಪಿ ಸಂಬಂಧ ಹೊಂದಿರುವವರು ಬಿಡೆನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಏಕೆಂದರೆ ಜಾತ್ಯತೀತ ಭಾರತೀಯ-ಅಮೆರಿಕನ್ ಸಂಸ್ಥೆಗಳು ಅಂತಹ ವ್ಯಕ್ತಿಗಳನ್ನು ಬದಿಗೆ ಸರಿಸುವಂತೆ ಬೈಡನ್ ಅವರ ಪರಿವರ್ತನಾ ತಂಡವನ್ನು ಸತತವಾಗಿ ಒತ್ತಾಯಿಸಿವೆ ಎನ್ನಲಾಗಿದೆ.

ಇದಕ್ಕೆ ವ್ಯತಿರಿಕ್ತವಾಗಿ ದೇವಯಾನಿ ಖೋಬರ್‌ಗಡೆ ಪ್ರಕರಣದಲ್ಲಿ ಪಾತ್ರವಹಿಸಿದ್ದ ಹಿರಿಯ ರಾಜತಾಂತ್ರಿಕ ಉಜ್ರಾ ಜಯಾ ಅಥವಾ ಸಿಎಎ, ಎನ್‌ಆರ್‌ಸಿ ಮತ್ತು ಕಾಶ್ಮೀರ ಲಾಕ್‌ಡೌನ್ ವಿರುದ್ಧ ಯುಎಸ್‌ನಲ್ಲಿ ಪ್ರತಿಭಟನಾ ರ್ಯಾಲಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಸಮೀರಾ ಫಾಜಿಲಿ ಅವರಂತಹ ವ್ಯಕ್ತಿಗಳನ್ನು ಬಿಡೆನ್ ತಂಡ ಹೊಂದಿದೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.


ಇದನ್ನೂ ಓದಿ: ಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. America is not like India, they wouldn’t take decisions based on the allegations, but based on the materialistic evidence. That is the reason America is world strong democracy.

    India is just a country of sentimental fools.

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...