Homeಕರ್ನಾಟಕಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಜಿಸಿಬಿ ಯಂತ್ರಗಳನ್ನು ಬಳಸಿ, ಜಿಬಿಎ ಅಧಿಕಾರಿಗಳು ಮತ್ತು ಪೊಲೀಸರ ಸಮ್ಮುಖದಲ್ಲಿ, ಯಾವುದೇ ಪೂರ್ವ ಸೂಚನೆ ಅಥವಾ ಕಾನೂನುಬದ್ಧ ಮಾಹಿತಿ ನೀಡದೇನೆಲಸಮಗೊಳಿಸಿ128 ದಿನಗಳು ಕಳೆದಿವೆ. ಸರ್ಕಾರವು ಪುನರ್ವಸತಿಯ ಭರವಸೆ ನೀಡಿತ್ತು. ಆದರೆ ಇಂದಿಗೂ ಆ ಭರವಸೆ ಈಡೇರಿಲ್ಲ. ಜನರು ತೀವ್ರ ಚಳಿ ಮತ್ತು ಉರಿಯುವ ಬಿಸಿಲನ್ನುಸಹಿಸಿಕೊಂಡು ಇನ್ನೂ ಬೀದಿಯಲ್ಲೇ ಬದುಕುತ್ತಿದ್ದಾರೆ ಎಂದು ಕೋಗಿಲು ಲೇಔಟ್‌ ಸ್ಲಂ ನಿವಾಸಿಗಳ ಹೋರಾಟ ಸಮಿತಿ ತಿಳಿಸಿದೆ. 

2026 ಏಪ್ರಿಲ್ 29ರ, ಮಧ್ಯಾಹ್ನ 12:30 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಮಿತಿ ಸರ್ಕಾರವು ಮುಂದಿನ 15ದಿನಗಳೊಳಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದೆ. ಪುನರ್ವಸತಿ ಕಲ್ಪಿಸುವಲ್ಲಿ ಸರ್ಕಾರ ವಿಫಲವಾದಲ್ಲಿ, ಸಮಿತಿಯು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು, ‘ಸರ್ಕಾರವು ಬಡವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿದೆ’ ಎಂದು ಹೇಳಿದ್ದಾರೆ. ಜನಪರ ಸರ್ಕಾರವೆಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರವು ಹೊಸ ವರ್ಷದ ಮೊದಲು ಒಳ್ಳೆಯ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ರಾಜಕೀಯ ಒತ್ತಡದ ಕಾರಣದಿಂದ ಆ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ನ್ಯಾಯ ಸಿಗುವವರೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ಸಮುದಾಯದೊಂದಿಗೆ ನಿಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟವನ್ನು ಆರಂಭಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಪ್ರಜಾ ವಿಮೋಚನಾ ಚಳುವಳಿಯ ಮುನಿ ಅಂಜಿನಪ್ಪ ಅವರು ಮಾತನಾಡಿ, ‘ಕೋಗಿಲು ಲೇಔಟ್‌ನ ಸ್ಥಳಾಂತರಗೊಂಡ ನಿವಾಸಿಗಳಿಗೆ ಕಂದಾಯ ಸಚಿವರು, ವಸತಿ ಸಚಿವರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದರು, ಇಷ್ಟು ದಿನ ನಾವು ತಾಳ್ಮೆಯಿಂದ ಕಾಯುತ್ತಿದ್ದೇವೆ. ಆದರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹಗಲು-ರಾತ್ರಿ ನಿರಂತರ ಧರಣಿ ಆರಂಭಿಸಲಾಗುವುದು’ ಎಂದು ಹೇಳಿದ್ದಾರೆ. 

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಮರಿಯಪ್ಪ ಅವರು ಮಾತನಾಡಿ, ‘ಜಿಬಿಎ ನಡೆಸಿದ ನೆಲಸಮ ಕಾರ್ಯಾಚರಣೆಯಿಂದ ಸಮುದಾಯವು ಕಳೆದ ನಾಲ್ಕು ತಿಂಗಳುಗಳಿಂದ ಬೀದಿಯಲ್ಲೇ ಬದುಕುವಂತಾಗಿದೆ’ ಎಂದು ಹೇಳಿದ್ದು, ಅತ್ಯಂತ ಅಂಚಿನ ಸಮುದಾಯಗಳು ಮೂಲಭೂತ ಸೌಲಭ್ಯಗಳಿಲ್ಲದೆ ತೀವ್ರ ಹವಾಮಾನ ಪರಿಸ್ಥಿತಿಯಲ್ಲಿ ಬದುಕುತ್ತಾ, ಇನ್ನೂ ಭರವಸೆ ನೀಡಿದ ಪುನರ್ವಸತಿಗಾಗಿಕಾಯುತ್ತಿವೆ, ಇನ್ನೂ ಹೆಚ್ಚು ಕಾಲ ಕಾಯಲು ಸಾಧ್ಯವಿಲ್ಲ. ಕರ್ನಾಟಕದಾದ್ಯಂತ ಎಲ್ಲಾ ಜನಪರ ಸಂಘಟನೆಗಳು ಕೋಗಿಲು ಲೇಔಟ್ ನಿವಾಸಿಗಳ ಹೋರಾಟಕ್ಕೆ ಬೆಂಬಲ ನೀಡಲಿವೆ ಎಂದು ಕರೆನೀಡಿದ್ದಾರೆ. ಅಲ್ಲದೇ ಮೇ 12ರಿಂದ ನಿರಂತರ ಹೋರಾಟ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ಸಮುದಾಯದ ಪ್ರತಿನಿಧಿಗಳಾದ ಶಬಾನಾ, ಹಸೀನಾ ಮತ್ತು ನಾರಾಯಣಮ್ಮ ಅವರು ಕಳೆದ 128 ದಿನಗಳಿಂದ ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡರು, ಚುನಾವಣೆಯ ಸಮಯದಲ್ಲಿ ನಾಯಕರು ಮತ ಕೇಳಲು ನಮ್ಮ ಮನೆಗಳಿಗೆ ಬಂದಿದ್ದರು. ಈಗ ಅವರು ನಮಗೆ ಮನೆಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದು, ಅದು ಸಾಧ್ಯವಾಗದಿದ್ದರೆ, ನಾವು ಈಗಿರುವ ಸ್ಥಳದಲ್ಲಿಯೇ ಭೂಮಿ ಹಕ್ಕು ನೀಡಬೇಕು, ಆಗ ನಾವು ಮನೆಗಳನ್ನು ಪುನರ್‌ನಿರ್ಮಿಸಿ ಅಲ್ಲಿಯೇ ಬದುಕಬಹುದು ಎಂದು ಹೇಳಿದ್ದಾರೆ. ಇಲ್ಲವಾದಲ್ಲಿ, ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ದುಡಿಯುವ ಜನರ ವೇದಿಕೆಯ ಪರವಾಗಿ ಮಾತನಾಡಿದ ನಂದಿನಿ ಅವರು, ‘ನಗರಗಳಿಗೆ ವಲಸೆ ಬಂದು ನಗರ ನಿರ್ಮಾಣಕ್ಕೆ ಕೊಡುಗೆ ನೀಡುವ ಸಮುದಾಯಗಳಿಗೆ ಗೌರವಯುತ ವಸತಿ ಕಲ್ಪಿಸುವುದು ಸರ್ಕಾರದ ಸಂವಿಧಾನಬದ್ಧ ಜವಾಬ್ದಾರಿ’ ಎಂದು ಹೇಳಿದರು. ಆದರೆ ಸರ್ಕಾರವು ಅವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿರುವುದು ಅನ್ಯಾಯವಾಗಿದೆ ಎಂದಿದ್ದಾರೆ. ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದೇ ಏಕೈಕ ಮಾರ್ಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...