Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...