Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...