Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...