Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...