Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...