Homeಮುಖಪುಟ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತ ಅವಹೇಳನಾಕಾರಿ ಹೇಳಿಕೆ ನೀಡಿದವರ ವಿರುದ್ಧ ಉತ್ತರಪ್ರದೇಶದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿಸಲು ಬುಲ್ಡೋಜರ್‌ ದಾಳಿ ನಡೆಸಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ (ಜೂನ್.16) ಛೀಮಾರಿ ಹಾಕಿದೆ.

“ಕೆಡವುವಿಕೆ ಎಂಬುದು ಕಾನೂನಿನ ಪ್ರಕಾರವಾಗಿರಬೇಕು, ಅವು ಪ್ರತೀಕಾರವಾಗಿರಬಾರದು” ಎಂದಿರುವ ಸುಪ್ರೀಂಕೋರ್ಟ್ ಗುರುವಾರ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ, ಕಟ್ಟಡವನ್ನು ನೆಲಸಮ ಮಾಡುವುದನ್ನು ನಿಲ್ಲಿಸುವಂತೆ ಆದೇಶ ನೀಡಿಲ್ಲ. “ನಾವು ಕಟ್ಟಡ ಉರುಳಿಸುವಿಕೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ. ಅವರಿಗೆ ಕಾನೂನಿನ ಪ್ರಕಾರ ಹೋಗಿ ಎಂದು ಹೇಳಬಹುದು” ಎಂದು ನ್ಯಾಯಾಲಯ ಹೇಳಿದೆ.

ಜಮಿಯತ್ ಉಲಾಮಾ-ಇ-ಹಿಂದ್ (Jamiat Ulama-i-Hind) ಎಂಬ ಸಂಘಟನೆಯು ಬುಲ್ಡೋಜರ್‌ ದಾಳಿ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದು, ಮನೆಗಳನ್ನು ಅಕ್ರಮವಾಗಿ ಧ್ವಂಸ ಮಾಡಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.

ಇದನ್ನೂ ಓದಿ: ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

ಸಂಘಟನೆಯು, ’ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಬೇರೆ ಯಾವುದೇ ಕಟ್ಟಡವನ್ನು ಕೆಡವದಂತೆ ನೋಡಿಕೊಳ್ಳಲು ನ್ಯಾಯಾಲಯವು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ಮುಹಮ್ಮದ್ ಕುರಿತು ಇಬ್ಬರು ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದ ಮೇಲೆ ಯೋಗಿ ಆದಿತ್ಯನಾಥ್ ಸರ್ಕಾರ ಇತ್ತೀಚೆಗೆ ಹಲವರು ಆಸ್ತಿ ಮೇಲೆ ಬುಲ್ಡೋಜರ್‌ ದಾಳಿ ನಡೆಸಿದೆ.

“ಈ ದಾಳಿಗಳು ಆಘಾತಕಾರಿ ಮತ್ತು ಭಯಾನಕ. ಮನೆಗಳನ್ನು ನೆಲಸಮಗೊಳಿಸಿದ ನಂತರ ನೋಟಿಸ್‌ಗಳನ್ನು ನೀಡಲಾಗಿದೆ. ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಯಾವುದೇ ಕಟ್ಟಡವನ್ನು ನೆಲಸಮ ಮಾಡುವ ಮುನ್ನ ಯುಪಿ ಕಾನೂನಿನ ಪ್ರಕಾರ ಕನಿಷ್ಠ 15 ರಿಂದ 40 ದಿನಗಳ ಸೂಚನೆ ಅತ್ಯಗತ್ಯ” ಎಂದು ಅರ್ಜಿದಾರರ ಪರ ವಕೀಲ ಸಿ.ಯು ಸಿಂ‌ಗ್  ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಯುಪಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ’ಕಟಟ್ಟಡಗಳನ್ನು ಕೆಡವಲು ಸರ್ಕಾರ ಕಾನೂನಿನ ಸರಿಯಾದ ಮಾರ್ಗಗಳನ್ನು ಅನುಸರಿಸಿದೆ. ಮಾಧ್ಯಮಗಳು ಅನಗತ್ಯವಾಗಿ ರಾಜಕೀಯ ಹೇಳಿಕೆಗಳೊಂದಿಗೆ ಪ್ರಕರಣವನ್ನು ಜೋಡಿಸುತ್ತವೆ” ಎಂದಿದ್ದಾರೆ.

ಅಕ್ರಮ ಬಂಧನ, ಮನೆಗಳ ಮೇಲೆ ಬುಲ್ಡೋಜರ್‌ ದಳಿ ಮತ್ತು ಪೊಲೀಸರ ಹಲ್ಲೆಯ ಆರೋಪಗಳ ಕುರಿತು ಗಮನಿಸುವಂತೆ ಕೆಲವು ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದರು. ಇದಾದ ಎರಡು ದಿನಗಳ ನಂತರ ನ್ಯಾಯಮೂರ್ತಿಗಳಾದ ಬೋಪಣ್ಣ ಮತ್ತು ವಿಕ್ರಮ್ ನಾಥ್‌ ಅವರ ರಜಾಕಾಲದ ಪೀಠ ಪ್ರಕರಣವನ್ನು ಕೈಗೆತ್ತಿಕೊಂಡಿದೆ.


ಇದನ್ನೂ ಓದಿ: ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ: ಬುಲ್ಡೋಜರ್‌ಗಳಿಂದ ಮನೆಗಳ ನಾಶಕ್ಕೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಜವಾಗ್ಲೂ ಮನೆಗಳನ್ನು ಬುಲ್ಡೋಜರ್ ನಿಂದ ಏಕಪಕ್ಷೀಯವಾಗಿ ಕೆಡವಿಹಾಕುವುದು ಅವಿವೇಕತನದ ಪರಮಾವಧಿ. ಕೋರ್ಟು ಛೀಮಾರಿ ಹಾಕಿದ್ದು ನಾಚಿಕೆಗೇಡು…..

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...