Homeಕರ್ನಾಟಕಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಡಾ.ರಾಜ್‌ಕುಮಾರ್‌ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಶಂಕರ್‌ ನಾಗ್ ನಿರ್ದೇಶನದ ‘ಒಂದು ಮುತ್ತಿನ ಕಥೆ’ ಸಿನಿಮಾ ಕನ್ನಡ ಚಿತ್ರರಂಗದ ಹೆಗ್ಗುರುತುಗಳಲ್ಲಿ ಒಂದು.

- Advertisement -
- Advertisement -

“ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ” ಎಂದು ನಟ, ಚಿಂತಕ ಚೇತನ್‌ ಅಹಿಂಸಾ ಅವರು ಪೋಸ್ಟ್ ಮಾಡಿದ ಬಳಿಕ, “ಭೂತ ಅವೈದಿಕ ದೇವರು” ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ನಟ ಚೇತನ್‌, “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದಾರೆ.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಆಗ್ರಹಿಸಿದ್ದರು.

ಚೇತನ್ ಅವರ ಅಭಿಪ್ರಾಯಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಶ್ಲೀಲ ಪದಗಳಿಂದ ಟ್ರೋಲ್ ಪಡೆ ನಿಂದಿಸಿತ್ತು. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಚೇತನ್‌ ಅವರ ಹೇಳಿಕೆಯನ್ನು ಸಮರ್ಥಿಸುವಂತೆ ‘ಒಂದು ಮುತ್ತಿನ ಕಥೆ’ ಸಿನಿಮಾದ ದೃಶ್ಯ ವೈರಲ್ ಆಗುತ್ತಿದೆ.

ವರನಟ ಡಾ.ರಾಜ್‌ಕುಮಾರ್‌ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಕರಾಟೆಕಿಂಗ್ ಶಂಕರ್‌ ನಾಗ್ ನಿರ್ದೇಶನದ ‘ಒಂದು ಮುತ್ತಿನ ಕಥೆ’ ಸಿನಿಮಾ ಕನ್ನಡ ಚಿತ್ರರಂಗದ ಹೆಗ್ಗುರುತುಗಳಲ್ಲಿ ಒಂದು.

ಈ ಸಿನಿಮಾದಲ್ಲಿ ಆದಿವಾಸಿಗಳಿಗೂ ವೈದಿಕ ಪರಂಪರೆಯ ಆರಾಧಕರಿಗೂ ನಡೆಯುವ ಸಂವಾದದ ದೃಶ್ಯವೊಂದನ್ನು ಹಂಚಿಕೊಳ್ಳುತ್ತಿರುವ ಕನ್ನಡಿಗರು, “ಭೂತವು ಅವೈದಿಕ ಪರಂಪರೆಯೆಂದು ಈ ಹಿಂದೆಯೇ ಶಂಕರ್‌ ನಾಗ್‌ ಅವರು ತೋರಿಸಿಕೊಟ್ಟಿದ್ದಾರೆ” ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿರಿ: ‘ಕಾಂತಾರ’ ವಿಮರ್ಶೆ: ಭೂತಾರಾಧನೆಯ ಆಚೆ-ಈಚೆ ಒಂದಿಷ್ಟು…

ಈ ದೃಶ್ಯದಲ್ಲಿ ಆದಿವಾಸಿಗಳನ್ನು ವೈದಿಕ ಪರಂಪರೆಯವರು ನಿಂದಿಸುವುದನ್ನು, ಭೂತಾರಾಧಕರನ್ನು ಹೀಯಾಳಿಸುವುದನ್ನು ನೋಡಬಹುದು.

“ಚೇತನ್ ಅಹಿಂಸಾರನ್ನು ಎಳೆದಾಡುತ್ತಿರುವವರು ದಯಮಾಡಿ ಗಮನಿಸಬೇಕು. ಚೇತನ್ ಈಗ ಹೇಳುತ್ತಿರುವುದನ್ನು ಶಂಕರ್ ನಾಗ್ ಅವರು ದಶಕಗಳ ಹಿಂದೆಯೇ ತಮ್ಮ ಸಿನಿಮಾದ ಮೂಲಕ ಹೇಳಿದ್ದರು” ಎಂದು ಬರಹಗಾರ ಕಾರ್ತಿಕಾದಿತ್ಯ ಬೆಳಗೋಡು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

“ಭೂತಾರಾಧನೆ ವೈದಿಕರ ಹಿಂದೂ ಸಂಪ್ರದಾಯದ ಭಾಗವೆಂದು ಹೇಳುವವರು ಇದನ್ನು ನೋಡಿರಿ” ಎಂದು ಹೋರಾಟಗಾರ ದೀಪು ಗೌಡ ಅವರು ಸಿನಿಮಾ ದೃಶ್ಯವನ್ನು ಹಂಚಿಕೊಂಡಿದ್ದಾರೆ.

“ಭೂತರಾಧನೆ ವೈಧಿಕರ ಹಿಂದೂ ಸಂಪ್ರದಾಯದ ಭಾಗವೆಂದು ಹೇಳುವವರು ನೋಡಿರಿ. ಈಗ ಹೇಳಿ ಭೂತಾರಾಧನೆ ನೆಲಮೂಲದ ಸಂಸ್ಕೃತಿನಾ ಇಲ್ಲ ವೈಧಿಕ ಹಿಂದೂ ಸಂಸ್ಕೃತಿನಾ?” ಎಂದು ತಿಪ್ಪೇಸ್ವಾಮಿ ಎಂಬವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ದೃಶ್ಯವು ವೈರಲ್ ಆಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...