Homeಕರ್ನಾಟಕಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಡಾ.ರಾಜ್‌ಕುಮಾರ್‌ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಶಂಕರ್‌ ನಾಗ್ ನಿರ್ದೇಶನದ ‘ಒಂದು ಮುತ್ತಿನ ಕಥೆ’ ಸಿನಿಮಾ ಕನ್ನಡ ಚಿತ್ರರಂಗದ ಹೆಗ್ಗುರುತುಗಳಲ್ಲಿ ಒಂದು.

- Advertisement -
- Advertisement -

“ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ” ಎಂದು ನಟ, ಚಿಂತಕ ಚೇತನ್‌ ಅಹಿಂಸಾ ಅವರು ಪೋಸ್ಟ್ ಮಾಡಿದ ಬಳಿಕ, “ಭೂತ ಅವೈದಿಕ ದೇವರು” ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ನಟ ಚೇತನ್‌, “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದಾರೆ.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಆಗ್ರಹಿಸಿದ್ದರು.

ಚೇತನ್ ಅವರ ಅಭಿಪ್ರಾಯಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಶ್ಲೀಲ ಪದಗಳಿಂದ ಟ್ರೋಲ್ ಪಡೆ ನಿಂದಿಸಿತ್ತು. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಚೇತನ್‌ ಅವರ ಹೇಳಿಕೆಯನ್ನು ಸಮರ್ಥಿಸುವಂತೆ ‘ಒಂದು ಮುತ್ತಿನ ಕಥೆ’ ಸಿನಿಮಾದ ದೃಶ್ಯ ವೈರಲ್ ಆಗುತ್ತಿದೆ.

ವರನಟ ಡಾ.ರಾಜ್‌ಕುಮಾರ್‌ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಕರಾಟೆಕಿಂಗ್ ಶಂಕರ್‌ ನಾಗ್ ನಿರ್ದೇಶನದ ‘ಒಂದು ಮುತ್ತಿನ ಕಥೆ’ ಸಿನಿಮಾ ಕನ್ನಡ ಚಿತ್ರರಂಗದ ಹೆಗ್ಗುರುತುಗಳಲ್ಲಿ ಒಂದು.

ಈ ಸಿನಿಮಾದಲ್ಲಿ ಆದಿವಾಸಿಗಳಿಗೂ ವೈದಿಕ ಪರಂಪರೆಯ ಆರಾಧಕರಿಗೂ ನಡೆಯುವ ಸಂವಾದದ ದೃಶ್ಯವೊಂದನ್ನು ಹಂಚಿಕೊಳ್ಳುತ್ತಿರುವ ಕನ್ನಡಿಗರು, “ಭೂತವು ಅವೈದಿಕ ಪರಂಪರೆಯೆಂದು ಈ ಹಿಂದೆಯೇ ಶಂಕರ್‌ ನಾಗ್‌ ಅವರು ತೋರಿಸಿಕೊಟ್ಟಿದ್ದಾರೆ” ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿರಿ: ‘ಕಾಂತಾರ’ ವಿಮರ್ಶೆ: ಭೂತಾರಾಧನೆಯ ಆಚೆ-ಈಚೆ ಒಂದಿಷ್ಟು…

ಈ ದೃಶ್ಯದಲ್ಲಿ ಆದಿವಾಸಿಗಳನ್ನು ವೈದಿಕ ಪರಂಪರೆಯವರು ನಿಂದಿಸುವುದನ್ನು, ಭೂತಾರಾಧಕರನ್ನು ಹೀಯಾಳಿಸುವುದನ್ನು ನೋಡಬಹುದು.

“ಚೇತನ್ ಅಹಿಂಸಾರನ್ನು ಎಳೆದಾಡುತ್ತಿರುವವರು ದಯಮಾಡಿ ಗಮನಿಸಬೇಕು. ಚೇತನ್ ಈಗ ಹೇಳುತ್ತಿರುವುದನ್ನು ಶಂಕರ್ ನಾಗ್ ಅವರು ದಶಕಗಳ ಹಿಂದೆಯೇ ತಮ್ಮ ಸಿನಿಮಾದ ಮೂಲಕ ಹೇಳಿದ್ದರು” ಎಂದು ಬರಹಗಾರ ಕಾರ್ತಿಕಾದಿತ್ಯ ಬೆಳಗೋಡು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

“ಭೂತಾರಾಧನೆ ವೈದಿಕರ ಹಿಂದೂ ಸಂಪ್ರದಾಯದ ಭಾಗವೆಂದು ಹೇಳುವವರು ಇದನ್ನು ನೋಡಿರಿ” ಎಂದು ಹೋರಾಟಗಾರ ದೀಪು ಗೌಡ ಅವರು ಸಿನಿಮಾ ದೃಶ್ಯವನ್ನು ಹಂಚಿಕೊಂಡಿದ್ದಾರೆ.

“ಭೂತರಾಧನೆ ವೈಧಿಕರ ಹಿಂದೂ ಸಂಪ್ರದಾಯದ ಭಾಗವೆಂದು ಹೇಳುವವರು ನೋಡಿರಿ. ಈಗ ಹೇಳಿ ಭೂತಾರಾಧನೆ ನೆಲಮೂಲದ ಸಂಸ್ಕೃತಿನಾ ಇಲ್ಲ ವೈಧಿಕ ಹಿಂದೂ ಸಂಸ್ಕೃತಿನಾ?” ಎಂದು ತಿಪ್ಪೇಸ್ವಾಮಿ ಎಂಬವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ದೃಶ್ಯವು ವೈರಲ್ ಆಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....