Homeಮುಖಪುಟನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

ನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

"ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ"

- Advertisement -
- Advertisement -

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳ ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಕೋವಿಡ್ ಸಾಂಕ್ರಾಮಿಕ ಸೇರಿದಂತೆ 2016ರಿಂದ ಸ್ಥೂಲ ಆರ್ಥಿಕ ಆಘಾತಗಳ ಒಟ್ಟು ಪರಿಣಾಮದಿಂದಾಗಿ ವಿಶೇಷವಾಗಿ ಭಾರತದ ಅನೌಪಚಾರಿಕ ಕ್ಷೇತ್ರವು ಜಿಡಿಪಿಯ ಶೇ.4.3 ಅಥವಾ 11.3 ಲಕ್ಷ ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವನ್ನು ಅನುಭವಿಸಿದೆ ಎಂದು ಅಂದಾಜಿಲಾಗಿದೆ ಎಂದು ಇಂಡಿಯಾ ರೇಟಿಂಗ್ಸ್ ಆ್ಯಂಡ್ ರೀಸರ್ಚ್ ಮಂಗಳವಾರ ತನ್ನ ವರದಿಯಲ್ಲಿ ಹೇಳಿದೆ

ಇತ್ತೀಚಿನ ಸ್ಥೂಲ ಆರ್ಥಿಕ ಆಘಾತಗಳು ಈ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಉಂಟು ಮಾಡಿವೆ ಎಂದು ಹೇಳಿರುವ ಇಂಡಿಯಾ ರೇಟಿಂಗ್ಸ್‌ನ ಪ್ರಧಾನ ಅರ್ಥಶಾಸ್ತ್ರಜ್ಞ ಸುನಿಲ್ ಕುಮಾರ್ ಸಿನ್ಹಾ ಅವರು, 2015-16 ಮತ್ತು 2022-23ರ ನಡುವೆ ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಿದ್ದಾರೆ. ಈ ಅವಧಿಯಲ್ಲಿ ಆರ್ಥಿಕತೆಯ ಸದೃಢೀಕರಣದಲ್ಲಿ ಏರಿಕೆಯಾಗಿತ್ತು ಮತ್ತು ಇದು ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರಣವಾಗಿತ್ತು. ಆರ್ಥಿಕತೆಯ ಸದೃಢೀಕರಣವು ಮುಂದಕ್ಕೊಯ್ಯುವ ದಾರಿಯಾಗಿದ್ದರೆ, ಅಸಂಘಟಿತ ವಲಯದಲ್ಲಿ ಉದ್ಯಮಗಳ ಸಂಖ್ಯೆ ತಗ್ಗಿದ್ದು ಉದ್ಯೋಗಾವಕಾಶ ಸೃಷ್ಟಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

2022-23ರಲ್ಲಿ ಇಂತಹ ಅಸಂಘಟಿತ ಉದ್ಯಮಗಳಿಂದ ಆರ್ಥಿಕತೆಯಲ್ಲಿ ಗ್ರಾಸ್-ವ್ಯಾಲ್ಯೂ ಆ್ಯಡೆಡ್ (ಜಿವಿಎ) ಅಥವಾ ಒಟ್ಟು ಮೌಲ್ಯದ ಪಾಲು ಈಗಲೂ 2015-16ರ ಮಟ್ಟಕ್ಕಿಂತ ಶೇ.1.6ರಷ್ಟು ಕಡಿಮೆಯಿದೆ. ಅಲ್ಲದೆ 2010-11 ಮತ್ತು 2015-16ರ ನಡುವೆ ಶೇ.7.4ರಷ್ಟಿದ್ದ ಅವುಗಳ ಸಂಯೋಜಿತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್)ವು ಆಗಿನಿಂದ ಶೇ.0.2ರಷ್ಟು ಕುಗ್ಗಿದೆ ಎಂದು ಇತ್ತೀಚಿಗೆ ಬಿಡುಗಡೆಗೊಂಡ ಸರ್ಕಾರದ ಅಸಂಘಟಿತ ವಲಯದ ಉದ್ಯಮಗಳ ವಾರ್ಷಿಕ ಸಮೀಕ್ಷೆಯನ್ನು ಆಧರಿಸಿ ಇಂಡಿಯಾ ರೇಟಿಂಗ್ಸ್ ಹೇಳಿದೆ.

ಸಮೀಕ್ಷೆಯ ಪ್ರಕಾರ, 2021-22ರಲ್ಲಿ 5.97 ಕೋಟಿಯಿದ್ದ ಕೃಷಿಯೇತರ ವಲಯದ ಸಂಸ್ಥೆಗಳ ಸಂಖ್ಯೆ 2022-23ರಲ್ಲಿ 6.5 ಕೋಟಿಗೆ ಏರಿಕೆಯಾಗಿದೆ. ಉದ್ಯೋಗವು 9.79 ಕೋಟಿ ಕಾರ್ಮಿಕರಿಂದ 10.96 ಕೋಟಿಗೆ ಏರಿದೆ. ಆದಾಗ್ಯೂ, ಇದು ಆರ್ಥಿಕ ಆಘಾತಗಳಿಗಿಂತ ಮೊದಲಿನ 2015-16ರ ಅವಧಿಯಲ್ಲಿದ್ದ 11.13 ಕೋಟಿ ಕಾರ್ಮಿಕರ ಸಂಖ್ಯೆಗಿಂತ ಕಡಿಮೆಯಾಗಿದೆ. 2015-16ರಲ್ಲಿ 3.6 ಕೋಟಿಯಷ್ಟಿದ್ದ ಉತ್ಪಾದನಾ ಉದ್ಯೋಗಗಳ ಸಂಖ್ಯೆ 2022-23ರಲ್ಲಿ 3.06ಕ್ಕೆ ಕುಸಿದಿದ್ದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಉತ್ಪಾದನೆ, ವ್ಯಾಪಾರ ಮತ್ತು ಇತರ ಸೇವೆಗಳ (ಎಂಟಿಒ) ಕ್ಷೇತ್ರದಲ್ಲಿ ಅಸಂಘಟಿತ ಉದ್ಯಮಗಳ ನೈಜ ಜಿವಿಎ 2022-23ರಲ್ಲಿ 9.51 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದರಲ್ಲಿ ಭಾರತದ ನೈಜ ಎಂಟಿಒ ಜಿವಿಎ ಪಾಲು 2015-16ರಲ್ಲಿದ್ದ ಶೇ.25.7ರಿಂದ ಶೇ.18.2ಕ್ಕೆ ತೀವ್ರವಾಗಿ ಕುಸಿದಿದೆ ಎಂದು ಇತ್ತೀಚಿನ ದತ್ತಾಂಶಗಳು ಸೂಚಿಸಿವೆ.

ಇತರ ಸೇವೆಗಳು ಮತ್ತು ವ್ಯಾಪಾರದಲ್ಲಿ ಕುಗ್ಗುವಿಕೆಯು ತೀವ್ರವಾಗಿದ್ದು, ಆರ್ಥಿಕ ಆಘಾತಗಳ ಮೊದಲಿನ ಅವಧಿಯಲ್ಲಿ ಶೇ.46.9 ಮತ್ತು ಶೇ.34.3ರಷ್ಟಿದ್ದ ಅಸಂಘಟಿತ ವಲಯದ ಪಾಲು 2022-23ರಲ್ಲಿ ಕ್ರಮವಾಗಿ ಶೇ.32.3 ಮತ್ತು ಶೇ.21.2ಕ್ಕೆ ಕುಸಿದಿದೆ. ಉತ್ಪಾದನಾ ಕ್ಷೇತ್ರದಲ್ಲಿ ಇದೇ ಅವಧಿಯಲ್ಲಿ ಶೇ.12.5ರಿಂದ ಶೇ.10.2ಕ್ಕೆ ಕುಸಿದಿದೆ ಎಂದು ಇಂಡಿಯಾ ರೇಟಿಂಗ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

2015-16ರ ನಂತರದ ಅವಧಿಯಲ್ಲಿ ಸ್ಥೂಲ ಆರ್ಥಿಕ ಆಘಾತಗಳು ಸಂಭವಿಸಿರದಿದ್ದರೆ ಮತ್ತು ಈ ಉದ್ಯಮಗಳ ಬೆಳವಣಿಗೆಯು 2010-11 ಮತ್ತು 2015-16 ನಡುವಿನ ಮಾದರಿಯನ್ನು ಅನುಸರಿಸಿದ್ದರೆ, ಇಂತಹ ಉದ್ಯಮಗಳ ಒಟ್ಟು ಸಂಖ್ಯೆ 2022-23ರಲ್ಲಿ 7.14 ಲಕ್ಷ ಕೋಟಿಗೆ ತಲುಪುತ್ತಿತ್ತು ಮತ್ತು ಕಾರ್ಮಿಕರ ಸಂಖ್ಯೆ 12.53 ಕೋಟಿಗೆ ಏರಿಕೆಯಾಗುತ್ತಿತ್ತು ಎಂದು ವರದಿ ಹೇಳಿದೆ.

ಅಸಂಘಟಿತ ವಲಯವು ದೇಶದ GVA ಗೆ 44% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು 75% ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23 ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ, ಅಸಂಘಟಿತ ವಲಯವು ದೇಶದ ಜಿವಿಎಗೆ ಶೇ. 44 ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು ಶೇ.75ರಷ್ಟು ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23ರಲ್ಲಿ ಅಸಂಘಟಿತ ವಲಯದ ಉದ್ಯಮಗಳ (ಯುಎಸ್‌ಇ) ಗಾತ್ರ 15.4 ಲಕ್ಷ ಕೋಟಿ ರೂಗಳಷ್ಟಿತ್ತು. 2010-11 ಮತ್ತು 2015-16 ರ ನಡುವೆ ದಾಖಲಾದ ಶೇ.12.9% ಸಿಎಜಿಆರ್‌ಗೆ ಹೋಲಿಸಿದರೆ, 2015-16 ಮತ್ತು 2022-23ರ ನಡುವೆ ಶೇ.4.3ರಷ್ಟು ಸಿಎಜಿಆರ್‌ ಬೆಳವಣಿಗೆ ಕಂಡಿದೆ. 2015-16 ರಿಂದ 2022-23 ರ ಅವಧಿಯಲ್ಲಿ ಯುಎಸ್‌ಯ ಬೆಳವಣಿಗೆಯ ವೇಗವು ಶೇ.12.9 ರಷ್ಟಿತ್ತು. 2022-23 ರಲ್ಲಿ ಅವುಗಳ ಗಾತ್ರವು ರೂ. 26.9 ಲಕ್ಷ ಕೋಟಿಗಳಷ್ಟಿತ್ತು ಎಂದು ಇಂಡಿಯಾ ರೇಟಿಂಗ್ಸ್ ವಿವರಿಸಿದೆ.

ಮೋದಿ ಸರ್ಕಾರದ ವಿರುದ್ದ ಖರ್ಗೆ ಕಿಡಿ

ವರದಿ ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದಿರುಕೊಂಡಿರುವ ಅವರು “ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್‌ಟಿ ಮತ್ತು ಯೋಜಿತವಲ್ಲದ ಕೋವಿಡ್ ಲಾಕ್‌ಡೌನ್‌ನ ವಿನಾಶಕಾರಿ ನಿರ್ಧಾರಗಳ ಮೂಲಕ ಪ್ರಧಾನಿ ಮೋದಿ ಭಾರತೀಯ ಆರ್ಥಿಕತೆಯ ಮೇಲೆ ದುರಂತವನ್ನು ಉಂಟುಮಾಡಿದರು. ಇದು ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸಿತು ಮತ್ತು ಕೋಟ್ಯಂತರ ಜನರ ಜೀವನವನ್ನು ಹಾಳು ಮಾಡಿದವು. ತಮ್ಮ ಜೀವನೋಪಾಯದ ಮೇಲೆ ಹೊಡೆತ ನೀಡಿದ ಮೋದಿ ಸರ್ಕಾರವನ್ನು ಭಾರತೀಯರು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ಪ್ರಚಾರಕ್ಕಾಗಿ ಕೋಟಿಗಟ್ಟಲೆ ಖರ್ಚು ಮಾಡಿದ ಮೇಲೂ, ನಿರ್ಲಜ್ಜ ಸುಳ್ಳು ಹೇಳಿಕೆಗಳ ಹೊರತಾಗಿಯೂ ಸತ್ಯ ಹೊರ ಬರುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಲೇಜು ಶಿಕ್ಷಣ ಇಲಾಖೆ ಪುಸ್ತಕ ಖರೀದಿ ಪಟ್ಟಿಯಲ್ಲಿ ‘ಸಪ್ನ’ ಮೇಲುಗೈ; ಸಣ್ಣ ಪ್ರಕಾಶಕರಿಗೆ ಅನ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...