Homeಮುಖಪುಟನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

ನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

"ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ"

- Advertisement -
- Advertisement -

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳ ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಕೋವಿಡ್ ಸಾಂಕ್ರಾಮಿಕ ಸೇರಿದಂತೆ 2016ರಿಂದ ಸ್ಥೂಲ ಆರ್ಥಿಕ ಆಘಾತಗಳ ಒಟ್ಟು ಪರಿಣಾಮದಿಂದಾಗಿ ವಿಶೇಷವಾಗಿ ಭಾರತದ ಅನೌಪಚಾರಿಕ ಕ್ಷೇತ್ರವು ಜಿಡಿಪಿಯ ಶೇ.4.3 ಅಥವಾ 11.3 ಲಕ್ಷ ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವನ್ನು ಅನುಭವಿಸಿದೆ ಎಂದು ಅಂದಾಜಿಲಾಗಿದೆ ಎಂದು ಇಂಡಿಯಾ ರೇಟಿಂಗ್ಸ್ ಆ್ಯಂಡ್ ರೀಸರ್ಚ್ ಮಂಗಳವಾರ ತನ್ನ ವರದಿಯಲ್ಲಿ ಹೇಳಿದೆ

ಇತ್ತೀಚಿನ ಸ್ಥೂಲ ಆರ್ಥಿಕ ಆಘಾತಗಳು ಈ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಉಂಟು ಮಾಡಿವೆ ಎಂದು ಹೇಳಿರುವ ಇಂಡಿಯಾ ರೇಟಿಂಗ್ಸ್‌ನ ಪ್ರಧಾನ ಅರ್ಥಶಾಸ್ತ್ರಜ್ಞ ಸುನಿಲ್ ಕುಮಾರ್ ಸಿನ್ಹಾ ಅವರು, 2015-16 ಮತ್ತು 2022-23ರ ನಡುವೆ ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಿದ್ದಾರೆ. ಈ ಅವಧಿಯಲ್ಲಿ ಆರ್ಥಿಕತೆಯ ಸದೃಢೀಕರಣದಲ್ಲಿ ಏರಿಕೆಯಾಗಿತ್ತು ಮತ್ತು ಇದು ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರಣವಾಗಿತ್ತು. ಆರ್ಥಿಕತೆಯ ಸದೃಢೀಕರಣವು ಮುಂದಕ್ಕೊಯ್ಯುವ ದಾರಿಯಾಗಿದ್ದರೆ, ಅಸಂಘಟಿತ ವಲಯದಲ್ಲಿ ಉದ್ಯಮಗಳ ಸಂಖ್ಯೆ ತಗ್ಗಿದ್ದು ಉದ್ಯೋಗಾವಕಾಶ ಸೃಷ್ಟಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

2022-23ರಲ್ಲಿ ಇಂತಹ ಅಸಂಘಟಿತ ಉದ್ಯಮಗಳಿಂದ ಆರ್ಥಿಕತೆಯಲ್ಲಿ ಗ್ರಾಸ್-ವ್ಯಾಲ್ಯೂ ಆ್ಯಡೆಡ್ (ಜಿವಿಎ) ಅಥವಾ ಒಟ್ಟು ಮೌಲ್ಯದ ಪಾಲು ಈಗಲೂ 2015-16ರ ಮಟ್ಟಕ್ಕಿಂತ ಶೇ.1.6ರಷ್ಟು ಕಡಿಮೆಯಿದೆ. ಅಲ್ಲದೆ 2010-11 ಮತ್ತು 2015-16ರ ನಡುವೆ ಶೇ.7.4ರಷ್ಟಿದ್ದ ಅವುಗಳ ಸಂಯೋಜಿತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್)ವು ಆಗಿನಿಂದ ಶೇ.0.2ರಷ್ಟು ಕುಗ್ಗಿದೆ ಎಂದು ಇತ್ತೀಚಿಗೆ ಬಿಡುಗಡೆಗೊಂಡ ಸರ್ಕಾರದ ಅಸಂಘಟಿತ ವಲಯದ ಉದ್ಯಮಗಳ ವಾರ್ಷಿಕ ಸಮೀಕ್ಷೆಯನ್ನು ಆಧರಿಸಿ ಇಂಡಿಯಾ ರೇಟಿಂಗ್ಸ್ ಹೇಳಿದೆ.

ಸಮೀಕ್ಷೆಯ ಪ್ರಕಾರ, 2021-22ರಲ್ಲಿ 5.97 ಕೋಟಿಯಿದ್ದ ಕೃಷಿಯೇತರ ವಲಯದ ಸಂಸ್ಥೆಗಳ ಸಂಖ್ಯೆ 2022-23ರಲ್ಲಿ 6.5 ಕೋಟಿಗೆ ಏರಿಕೆಯಾಗಿದೆ. ಉದ್ಯೋಗವು 9.79 ಕೋಟಿ ಕಾರ್ಮಿಕರಿಂದ 10.96 ಕೋಟಿಗೆ ಏರಿದೆ. ಆದಾಗ್ಯೂ, ಇದು ಆರ್ಥಿಕ ಆಘಾತಗಳಿಗಿಂತ ಮೊದಲಿನ 2015-16ರ ಅವಧಿಯಲ್ಲಿದ್ದ 11.13 ಕೋಟಿ ಕಾರ್ಮಿಕರ ಸಂಖ್ಯೆಗಿಂತ ಕಡಿಮೆಯಾಗಿದೆ. 2015-16ರಲ್ಲಿ 3.6 ಕೋಟಿಯಷ್ಟಿದ್ದ ಉತ್ಪಾದನಾ ಉದ್ಯೋಗಗಳ ಸಂಖ್ಯೆ 2022-23ರಲ್ಲಿ 3.06ಕ್ಕೆ ಕುಸಿದಿದ್ದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಉತ್ಪಾದನೆ, ವ್ಯಾಪಾರ ಮತ್ತು ಇತರ ಸೇವೆಗಳ (ಎಂಟಿಒ) ಕ್ಷೇತ್ರದಲ್ಲಿ ಅಸಂಘಟಿತ ಉದ್ಯಮಗಳ ನೈಜ ಜಿವಿಎ 2022-23ರಲ್ಲಿ 9.51 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದರಲ್ಲಿ ಭಾರತದ ನೈಜ ಎಂಟಿಒ ಜಿವಿಎ ಪಾಲು 2015-16ರಲ್ಲಿದ್ದ ಶೇ.25.7ರಿಂದ ಶೇ.18.2ಕ್ಕೆ ತೀವ್ರವಾಗಿ ಕುಸಿದಿದೆ ಎಂದು ಇತ್ತೀಚಿನ ದತ್ತಾಂಶಗಳು ಸೂಚಿಸಿವೆ.

ಇತರ ಸೇವೆಗಳು ಮತ್ತು ವ್ಯಾಪಾರದಲ್ಲಿ ಕುಗ್ಗುವಿಕೆಯು ತೀವ್ರವಾಗಿದ್ದು, ಆರ್ಥಿಕ ಆಘಾತಗಳ ಮೊದಲಿನ ಅವಧಿಯಲ್ಲಿ ಶೇ.46.9 ಮತ್ತು ಶೇ.34.3ರಷ್ಟಿದ್ದ ಅಸಂಘಟಿತ ವಲಯದ ಪಾಲು 2022-23ರಲ್ಲಿ ಕ್ರಮವಾಗಿ ಶೇ.32.3 ಮತ್ತು ಶೇ.21.2ಕ್ಕೆ ಕುಸಿದಿದೆ. ಉತ್ಪಾದನಾ ಕ್ಷೇತ್ರದಲ್ಲಿ ಇದೇ ಅವಧಿಯಲ್ಲಿ ಶೇ.12.5ರಿಂದ ಶೇ.10.2ಕ್ಕೆ ಕುಸಿದಿದೆ ಎಂದು ಇಂಡಿಯಾ ರೇಟಿಂಗ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

2015-16ರ ನಂತರದ ಅವಧಿಯಲ್ಲಿ ಸ್ಥೂಲ ಆರ್ಥಿಕ ಆಘಾತಗಳು ಸಂಭವಿಸಿರದಿದ್ದರೆ ಮತ್ತು ಈ ಉದ್ಯಮಗಳ ಬೆಳವಣಿಗೆಯು 2010-11 ಮತ್ತು 2015-16 ನಡುವಿನ ಮಾದರಿಯನ್ನು ಅನುಸರಿಸಿದ್ದರೆ, ಇಂತಹ ಉದ್ಯಮಗಳ ಒಟ್ಟು ಸಂಖ್ಯೆ 2022-23ರಲ್ಲಿ 7.14 ಲಕ್ಷ ಕೋಟಿಗೆ ತಲುಪುತ್ತಿತ್ತು ಮತ್ತು ಕಾರ್ಮಿಕರ ಸಂಖ್ಯೆ 12.53 ಕೋಟಿಗೆ ಏರಿಕೆಯಾಗುತ್ತಿತ್ತು ಎಂದು ವರದಿ ಹೇಳಿದೆ.

ಅಸಂಘಟಿತ ವಲಯವು ದೇಶದ GVA ಗೆ 44% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು 75% ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23 ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ, ಅಸಂಘಟಿತ ವಲಯವು ದೇಶದ ಜಿವಿಎಗೆ ಶೇ. 44 ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು ಶೇ.75ರಷ್ಟು ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23ರಲ್ಲಿ ಅಸಂಘಟಿತ ವಲಯದ ಉದ್ಯಮಗಳ (ಯುಎಸ್‌ಇ) ಗಾತ್ರ 15.4 ಲಕ್ಷ ಕೋಟಿ ರೂಗಳಷ್ಟಿತ್ತು. 2010-11 ಮತ್ತು 2015-16 ರ ನಡುವೆ ದಾಖಲಾದ ಶೇ.12.9% ಸಿಎಜಿಆರ್‌ಗೆ ಹೋಲಿಸಿದರೆ, 2015-16 ಮತ್ತು 2022-23ರ ನಡುವೆ ಶೇ.4.3ರಷ್ಟು ಸಿಎಜಿಆರ್‌ ಬೆಳವಣಿಗೆ ಕಂಡಿದೆ. 2015-16 ರಿಂದ 2022-23 ರ ಅವಧಿಯಲ್ಲಿ ಯುಎಸ್‌ಯ ಬೆಳವಣಿಗೆಯ ವೇಗವು ಶೇ.12.9 ರಷ್ಟಿತ್ತು. 2022-23 ರಲ್ಲಿ ಅವುಗಳ ಗಾತ್ರವು ರೂ. 26.9 ಲಕ್ಷ ಕೋಟಿಗಳಷ್ಟಿತ್ತು ಎಂದು ಇಂಡಿಯಾ ರೇಟಿಂಗ್ಸ್ ವಿವರಿಸಿದೆ.

ಮೋದಿ ಸರ್ಕಾರದ ವಿರುದ್ದ ಖರ್ಗೆ ಕಿಡಿ

ವರದಿ ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದಿರುಕೊಂಡಿರುವ ಅವರು “ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್‌ಟಿ ಮತ್ತು ಯೋಜಿತವಲ್ಲದ ಕೋವಿಡ್ ಲಾಕ್‌ಡೌನ್‌ನ ವಿನಾಶಕಾರಿ ನಿರ್ಧಾರಗಳ ಮೂಲಕ ಪ್ರಧಾನಿ ಮೋದಿ ಭಾರತೀಯ ಆರ್ಥಿಕತೆಯ ಮೇಲೆ ದುರಂತವನ್ನು ಉಂಟುಮಾಡಿದರು. ಇದು ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸಿತು ಮತ್ತು ಕೋಟ್ಯಂತರ ಜನರ ಜೀವನವನ್ನು ಹಾಳು ಮಾಡಿದವು. ತಮ್ಮ ಜೀವನೋಪಾಯದ ಮೇಲೆ ಹೊಡೆತ ನೀಡಿದ ಮೋದಿ ಸರ್ಕಾರವನ್ನು ಭಾರತೀಯರು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ಪ್ರಚಾರಕ್ಕಾಗಿ ಕೋಟಿಗಟ್ಟಲೆ ಖರ್ಚು ಮಾಡಿದ ಮೇಲೂ, ನಿರ್ಲಜ್ಜ ಸುಳ್ಳು ಹೇಳಿಕೆಗಳ ಹೊರತಾಗಿಯೂ ಸತ್ಯ ಹೊರ ಬರುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಲೇಜು ಶಿಕ್ಷಣ ಇಲಾಖೆ ಪುಸ್ತಕ ಖರೀದಿ ಪಟ್ಟಿಯಲ್ಲಿ ‘ಸಪ್ನ’ ಮೇಲುಗೈ; ಸಣ್ಣ ಪ್ರಕಾಶಕರಿಗೆ ಅನ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...