Homeಮುಖಪುಟನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

ನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

"ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ"

- Advertisement -
- Advertisement -

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳ ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಕೋವಿಡ್ ಸಾಂಕ್ರಾಮಿಕ ಸೇರಿದಂತೆ 2016ರಿಂದ ಸ್ಥೂಲ ಆರ್ಥಿಕ ಆಘಾತಗಳ ಒಟ್ಟು ಪರಿಣಾಮದಿಂದಾಗಿ ವಿಶೇಷವಾಗಿ ಭಾರತದ ಅನೌಪಚಾರಿಕ ಕ್ಷೇತ್ರವು ಜಿಡಿಪಿಯ ಶೇ.4.3 ಅಥವಾ 11.3 ಲಕ್ಷ ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವನ್ನು ಅನುಭವಿಸಿದೆ ಎಂದು ಅಂದಾಜಿಲಾಗಿದೆ ಎಂದು ಇಂಡಿಯಾ ರೇಟಿಂಗ್ಸ್ ಆ್ಯಂಡ್ ರೀಸರ್ಚ್ ಮಂಗಳವಾರ ತನ್ನ ವರದಿಯಲ್ಲಿ ಹೇಳಿದೆ

ಇತ್ತೀಚಿನ ಸ್ಥೂಲ ಆರ್ಥಿಕ ಆಘಾತಗಳು ಈ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಉಂಟು ಮಾಡಿವೆ ಎಂದು ಹೇಳಿರುವ ಇಂಡಿಯಾ ರೇಟಿಂಗ್ಸ್‌ನ ಪ್ರಧಾನ ಅರ್ಥಶಾಸ್ತ್ರಜ್ಞ ಸುನಿಲ್ ಕುಮಾರ್ ಸಿನ್ಹಾ ಅವರು, 2015-16 ಮತ್ತು 2022-23ರ ನಡುವೆ ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಿದ್ದಾರೆ. ಈ ಅವಧಿಯಲ್ಲಿ ಆರ್ಥಿಕತೆಯ ಸದೃಢೀಕರಣದಲ್ಲಿ ಏರಿಕೆಯಾಗಿತ್ತು ಮತ್ತು ಇದು ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರಣವಾಗಿತ್ತು. ಆರ್ಥಿಕತೆಯ ಸದೃಢೀಕರಣವು ಮುಂದಕ್ಕೊಯ್ಯುವ ದಾರಿಯಾಗಿದ್ದರೆ, ಅಸಂಘಟಿತ ವಲಯದಲ್ಲಿ ಉದ್ಯಮಗಳ ಸಂಖ್ಯೆ ತಗ್ಗಿದ್ದು ಉದ್ಯೋಗಾವಕಾಶ ಸೃಷ್ಟಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

2022-23ರಲ್ಲಿ ಇಂತಹ ಅಸಂಘಟಿತ ಉದ್ಯಮಗಳಿಂದ ಆರ್ಥಿಕತೆಯಲ್ಲಿ ಗ್ರಾಸ್-ವ್ಯಾಲ್ಯೂ ಆ್ಯಡೆಡ್ (ಜಿವಿಎ) ಅಥವಾ ಒಟ್ಟು ಮೌಲ್ಯದ ಪಾಲು ಈಗಲೂ 2015-16ರ ಮಟ್ಟಕ್ಕಿಂತ ಶೇ.1.6ರಷ್ಟು ಕಡಿಮೆಯಿದೆ. ಅಲ್ಲದೆ 2010-11 ಮತ್ತು 2015-16ರ ನಡುವೆ ಶೇ.7.4ರಷ್ಟಿದ್ದ ಅವುಗಳ ಸಂಯೋಜಿತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್)ವು ಆಗಿನಿಂದ ಶೇ.0.2ರಷ್ಟು ಕುಗ್ಗಿದೆ ಎಂದು ಇತ್ತೀಚಿಗೆ ಬಿಡುಗಡೆಗೊಂಡ ಸರ್ಕಾರದ ಅಸಂಘಟಿತ ವಲಯದ ಉದ್ಯಮಗಳ ವಾರ್ಷಿಕ ಸಮೀಕ್ಷೆಯನ್ನು ಆಧರಿಸಿ ಇಂಡಿಯಾ ರೇಟಿಂಗ್ಸ್ ಹೇಳಿದೆ.

ಸಮೀಕ್ಷೆಯ ಪ್ರಕಾರ, 2021-22ರಲ್ಲಿ 5.97 ಕೋಟಿಯಿದ್ದ ಕೃಷಿಯೇತರ ವಲಯದ ಸಂಸ್ಥೆಗಳ ಸಂಖ್ಯೆ 2022-23ರಲ್ಲಿ 6.5 ಕೋಟಿಗೆ ಏರಿಕೆಯಾಗಿದೆ. ಉದ್ಯೋಗವು 9.79 ಕೋಟಿ ಕಾರ್ಮಿಕರಿಂದ 10.96 ಕೋಟಿಗೆ ಏರಿದೆ. ಆದಾಗ್ಯೂ, ಇದು ಆರ್ಥಿಕ ಆಘಾತಗಳಿಗಿಂತ ಮೊದಲಿನ 2015-16ರ ಅವಧಿಯಲ್ಲಿದ್ದ 11.13 ಕೋಟಿ ಕಾರ್ಮಿಕರ ಸಂಖ್ಯೆಗಿಂತ ಕಡಿಮೆಯಾಗಿದೆ. 2015-16ರಲ್ಲಿ 3.6 ಕೋಟಿಯಷ್ಟಿದ್ದ ಉತ್ಪಾದನಾ ಉದ್ಯೋಗಗಳ ಸಂಖ್ಯೆ 2022-23ರಲ್ಲಿ 3.06ಕ್ಕೆ ಕುಸಿದಿದ್ದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಉತ್ಪಾದನೆ, ವ್ಯಾಪಾರ ಮತ್ತು ಇತರ ಸೇವೆಗಳ (ಎಂಟಿಒ) ಕ್ಷೇತ್ರದಲ್ಲಿ ಅಸಂಘಟಿತ ಉದ್ಯಮಗಳ ನೈಜ ಜಿವಿಎ 2022-23ರಲ್ಲಿ 9.51 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದರಲ್ಲಿ ಭಾರತದ ನೈಜ ಎಂಟಿಒ ಜಿವಿಎ ಪಾಲು 2015-16ರಲ್ಲಿದ್ದ ಶೇ.25.7ರಿಂದ ಶೇ.18.2ಕ್ಕೆ ತೀವ್ರವಾಗಿ ಕುಸಿದಿದೆ ಎಂದು ಇತ್ತೀಚಿನ ದತ್ತಾಂಶಗಳು ಸೂಚಿಸಿವೆ.

ಇತರ ಸೇವೆಗಳು ಮತ್ತು ವ್ಯಾಪಾರದಲ್ಲಿ ಕುಗ್ಗುವಿಕೆಯು ತೀವ್ರವಾಗಿದ್ದು, ಆರ್ಥಿಕ ಆಘಾತಗಳ ಮೊದಲಿನ ಅವಧಿಯಲ್ಲಿ ಶೇ.46.9 ಮತ್ತು ಶೇ.34.3ರಷ್ಟಿದ್ದ ಅಸಂಘಟಿತ ವಲಯದ ಪಾಲು 2022-23ರಲ್ಲಿ ಕ್ರಮವಾಗಿ ಶೇ.32.3 ಮತ್ತು ಶೇ.21.2ಕ್ಕೆ ಕುಸಿದಿದೆ. ಉತ್ಪಾದನಾ ಕ್ಷೇತ್ರದಲ್ಲಿ ಇದೇ ಅವಧಿಯಲ್ಲಿ ಶೇ.12.5ರಿಂದ ಶೇ.10.2ಕ್ಕೆ ಕುಸಿದಿದೆ ಎಂದು ಇಂಡಿಯಾ ರೇಟಿಂಗ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

2015-16ರ ನಂತರದ ಅವಧಿಯಲ್ಲಿ ಸ್ಥೂಲ ಆರ್ಥಿಕ ಆಘಾತಗಳು ಸಂಭವಿಸಿರದಿದ್ದರೆ ಮತ್ತು ಈ ಉದ್ಯಮಗಳ ಬೆಳವಣಿಗೆಯು 2010-11 ಮತ್ತು 2015-16 ನಡುವಿನ ಮಾದರಿಯನ್ನು ಅನುಸರಿಸಿದ್ದರೆ, ಇಂತಹ ಉದ್ಯಮಗಳ ಒಟ್ಟು ಸಂಖ್ಯೆ 2022-23ರಲ್ಲಿ 7.14 ಲಕ್ಷ ಕೋಟಿಗೆ ತಲುಪುತ್ತಿತ್ತು ಮತ್ತು ಕಾರ್ಮಿಕರ ಸಂಖ್ಯೆ 12.53 ಕೋಟಿಗೆ ಏರಿಕೆಯಾಗುತ್ತಿತ್ತು ಎಂದು ವರದಿ ಹೇಳಿದೆ.

ಅಸಂಘಟಿತ ವಲಯವು ದೇಶದ GVA ಗೆ 44% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು 75% ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23 ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ, ಅಸಂಘಟಿತ ವಲಯವು ದೇಶದ ಜಿವಿಎಗೆ ಶೇ. 44 ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು ಶೇ.75ರಷ್ಟು ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23ರಲ್ಲಿ ಅಸಂಘಟಿತ ವಲಯದ ಉದ್ಯಮಗಳ (ಯುಎಸ್‌ಇ) ಗಾತ್ರ 15.4 ಲಕ್ಷ ಕೋಟಿ ರೂಗಳಷ್ಟಿತ್ತು. 2010-11 ಮತ್ತು 2015-16 ರ ನಡುವೆ ದಾಖಲಾದ ಶೇ.12.9% ಸಿಎಜಿಆರ್‌ಗೆ ಹೋಲಿಸಿದರೆ, 2015-16 ಮತ್ತು 2022-23ರ ನಡುವೆ ಶೇ.4.3ರಷ್ಟು ಸಿಎಜಿಆರ್‌ ಬೆಳವಣಿಗೆ ಕಂಡಿದೆ. 2015-16 ರಿಂದ 2022-23 ರ ಅವಧಿಯಲ್ಲಿ ಯುಎಸ್‌ಯ ಬೆಳವಣಿಗೆಯ ವೇಗವು ಶೇ.12.9 ರಷ್ಟಿತ್ತು. 2022-23 ರಲ್ಲಿ ಅವುಗಳ ಗಾತ್ರವು ರೂ. 26.9 ಲಕ್ಷ ಕೋಟಿಗಳಷ್ಟಿತ್ತು ಎಂದು ಇಂಡಿಯಾ ರೇಟಿಂಗ್ಸ್ ವಿವರಿಸಿದೆ.

ಮೋದಿ ಸರ್ಕಾರದ ವಿರುದ್ದ ಖರ್ಗೆ ಕಿಡಿ

ವರದಿ ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದಿರುಕೊಂಡಿರುವ ಅವರು “ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್‌ಟಿ ಮತ್ತು ಯೋಜಿತವಲ್ಲದ ಕೋವಿಡ್ ಲಾಕ್‌ಡೌನ್‌ನ ವಿನಾಶಕಾರಿ ನಿರ್ಧಾರಗಳ ಮೂಲಕ ಪ್ರಧಾನಿ ಮೋದಿ ಭಾರತೀಯ ಆರ್ಥಿಕತೆಯ ಮೇಲೆ ದುರಂತವನ್ನು ಉಂಟುಮಾಡಿದರು. ಇದು ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸಿತು ಮತ್ತು ಕೋಟ್ಯಂತರ ಜನರ ಜೀವನವನ್ನು ಹಾಳು ಮಾಡಿದವು. ತಮ್ಮ ಜೀವನೋಪಾಯದ ಮೇಲೆ ಹೊಡೆತ ನೀಡಿದ ಮೋದಿ ಸರ್ಕಾರವನ್ನು ಭಾರತೀಯರು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ಪ್ರಚಾರಕ್ಕಾಗಿ ಕೋಟಿಗಟ್ಟಲೆ ಖರ್ಚು ಮಾಡಿದ ಮೇಲೂ, ನಿರ್ಲಜ್ಜ ಸುಳ್ಳು ಹೇಳಿಕೆಗಳ ಹೊರತಾಗಿಯೂ ಸತ್ಯ ಹೊರ ಬರುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಲೇಜು ಶಿಕ್ಷಣ ಇಲಾಖೆ ಪುಸ್ತಕ ಖರೀದಿ ಪಟ್ಟಿಯಲ್ಲಿ ‘ಸಪ್ನ’ ಮೇಲುಗೈ; ಸಣ್ಣ ಪ್ರಕಾಶಕರಿಗೆ ಅನ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...