Homeಮುಖಪುಟನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

ನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

"ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ"

- Advertisement -
- Advertisement -

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳ ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಕೋವಿಡ್ ಸಾಂಕ್ರಾಮಿಕ ಸೇರಿದಂತೆ 2016ರಿಂದ ಸ್ಥೂಲ ಆರ್ಥಿಕ ಆಘಾತಗಳ ಒಟ್ಟು ಪರಿಣಾಮದಿಂದಾಗಿ ವಿಶೇಷವಾಗಿ ಭಾರತದ ಅನೌಪಚಾರಿಕ ಕ್ಷೇತ್ರವು ಜಿಡಿಪಿಯ ಶೇ.4.3 ಅಥವಾ 11.3 ಲಕ್ಷ ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವನ್ನು ಅನುಭವಿಸಿದೆ ಎಂದು ಅಂದಾಜಿಲಾಗಿದೆ ಎಂದು ಇಂಡಿಯಾ ರೇಟಿಂಗ್ಸ್ ಆ್ಯಂಡ್ ರೀಸರ್ಚ್ ಮಂಗಳವಾರ ತನ್ನ ವರದಿಯಲ್ಲಿ ಹೇಳಿದೆ

ಇತ್ತೀಚಿನ ಸ್ಥೂಲ ಆರ್ಥಿಕ ಆಘಾತಗಳು ಈ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಉಂಟು ಮಾಡಿವೆ ಎಂದು ಹೇಳಿರುವ ಇಂಡಿಯಾ ರೇಟಿಂಗ್ಸ್‌ನ ಪ್ರಧಾನ ಅರ್ಥಶಾಸ್ತ್ರಜ್ಞ ಸುನಿಲ್ ಕುಮಾರ್ ಸಿನ್ಹಾ ಅವರು, 2015-16 ಮತ್ತು 2022-23ರ ನಡುವೆ ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಿದ್ದಾರೆ. ಈ ಅವಧಿಯಲ್ಲಿ ಆರ್ಥಿಕತೆಯ ಸದೃಢೀಕರಣದಲ್ಲಿ ಏರಿಕೆಯಾಗಿತ್ತು ಮತ್ತು ಇದು ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರಣವಾಗಿತ್ತು. ಆರ್ಥಿಕತೆಯ ಸದೃಢೀಕರಣವು ಮುಂದಕ್ಕೊಯ್ಯುವ ದಾರಿಯಾಗಿದ್ದರೆ, ಅಸಂಘಟಿತ ವಲಯದಲ್ಲಿ ಉದ್ಯಮಗಳ ಸಂಖ್ಯೆ ತಗ್ಗಿದ್ದು ಉದ್ಯೋಗಾವಕಾಶ ಸೃಷ್ಟಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

2022-23ರಲ್ಲಿ ಇಂತಹ ಅಸಂಘಟಿತ ಉದ್ಯಮಗಳಿಂದ ಆರ್ಥಿಕತೆಯಲ್ಲಿ ಗ್ರಾಸ್-ವ್ಯಾಲ್ಯೂ ಆ್ಯಡೆಡ್ (ಜಿವಿಎ) ಅಥವಾ ಒಟ್ಟು ಮೌಲ್ಯದ ಪಾಲು ಈಗಲೂ 2015-16ರ ಮಟ್ಟಕ್ಕಿಂತ ಶೇ.1.6ರಷ್ಟು ಕಡಿಮೆಯಿದೆ. ಅಲ್ಲದೆ 2010-11 ಮತ್ತು 2015-16ರ ನಡುವೆ ಶೇ.7.4ರಷ್ಟಿದ್ದ ಅವುಗಳ ಸಂಯೋಜಿತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್)ವು ಆಗಿನಿಂದ ಶೇ.0.2ರಷ್ಟು ಕುಗ್ಗಿದೆ ಎಂದು ಇತ್ತೀಚಿಗೆ ಬಿಡುಗಡೆಗೊಂಡ ಸರ್ಕಾರದ ಅಸಂಘಟಿತ ವಲಯದ ಉದ್ಯಮಗಳ ವಾರ್ಷಿಕ ಸಮೀಕ್ಷೆಯನ್ನು ಆಧರಿಸಿ ಇಂಡಿಯಾ ರೇಟಿಂಗ್ಸ್ ಹೇಳಿದೆ.

ಸಮೀಕ್ಷೆಯ ಪ್ರಕಾರ, 2021-22ರಲ್ಲಿ 5.97 ಕೋಟಿಯಿದ್ದ ಕೃಷಿಯೇತರ ವಲಯದ ಸಂಸ್ಥೆಗಳ ಸಂಖ್ಯೆ 2022-23ರಲ್ಲಿ 6.5 ಕೋಟಿಗೆ ಏರಿಕೆಯಾಗಿದೆ. ಉದ್ಯೋಗವು 9.79 ಕೋಟಿ ಕಾರ್ಮಿಕರಿಂದ 10.96 ಕೋಟಿಗೆ ಏರಿದೆ. ಆದಾಗ್ಯೂ, ಇದು ಆರ್ಥಿಕ ಆಘಾತಗಳಿಗಿಂತ ಮೊದಲಿನ 2015-16ರ ಅವಧಿಯಲ್ಲಿದ್ದ 11.13 ಕೋಟಿ ಕಾರ್ಮಿಕರ ಸಂಖ್ಯೆಗಿಂತ ಕಡಿಮೆಯಾಗಿದೆ. 2015-16ರಲ್ಲಿ 3.6 ಕೋಟಿಯಷ್ಟಿದ್ದ ಉತ್ಪಾದನಾ ಉದ್ಯೋಗಗಳ ಸಂಖ್ಯೆ 2022-23ರಲ್ಲಿ 3.06ಕ್ಕೆ ಕುಸಿದಿದ್ದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಉತ್ಪಾದನೆ, ವ್ಯಾಪಾರ ಮತ್ತು ಇತರ ಸೇವೆಗಳ (ಎಂಟಿಒ) ಕ್ಷೇತ್ರದಲ್ಲಿ ಅಸಂಘಟಿತ ಉದ್ಯಮಗಳ ನೈಜ ಜಿವಿಎ 2022-23ರಲ್ಲಿ 9.51 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದರಲ್ಲಿ ಭಾರತದ ನೈಜ ಎಂಟಿಒ ಜಿವಿಎ ಪಾಲು 2015-16ರಲ್ಲಿದ್ದ ಶೇ.25.7ರಿಂದ ಶೇ.18.2ಕ್ಕೆ ತೀವ್ರವಾಗಿ ಕುಸಿದಿದೆ ಎಂದು ಇತ್ತೀಚಿನ ದತ್ತಾಂಶಗಳು ಸೂಚಿಸಿವೆ.

ಇತರ ಸೇವೆಗಳು ಮತ್ತು ವ್ಯಾಪಾರದಲ್ಲಿ ಕುಗ್ಗುವಿಕೆಯು ತೀವ್ರವಾಗಿದ್ದು, ಆರ್ಥಿಕ ಆಘಾತಗಳ ಮೊದಲಿನ ಅವಧಿಯಲ್ಲಿ ಶೇ.46.9 ಮತ್ತು ಶೇ.34.3ರಷ್ಟಿದ್ದ ಅಸಂಘಟಿತ ವಲಯದ ಪಾಲು 2022-23ರಲ್ಲಿ ಕ್ರಮವಾಗಿ ಶೇ.32.3 ಮತ್ತು ಶೇ.21.2ಕ್ಕೆ ಕುಸಿದಿದೆ. ಉತ್ಪಾದನಾ ಕ್ಷೇತ್ರದಲ್ಲಿ ಇದೇ ಅವಧಿಯಲ್ಲಿ ಶೇ.12.5ರಿಂದ ಶೇ.10.2ಕ್ಕೆ ಕುಸಿದಿದೆ ಎಂದು ಇಂಡಿಯಾ ರೇಟಿಂಗ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

2015-16ರ ನಂತರದ ಅವಧಿಯಲ್ಲಿ ಸ್ಥೂಲ ಆರ್ಥಿಕ ಆಘಾತಗಳು ಸಂಭವಿಸಿರದಿದ್ದರೆ ಮತ್ತು ಈ ಉದ್ಯಮಗಳ ಬೆಳವಣಿಗೆಯು 2010-11 ಮತ್ತು 2015-16 ನಡುವಿನ ಮಾದರಿಯನ್ನು ಅನುಸರಿಸಿದ್ದರೆ, ಇಂತಹ ಉದ್ಯಮಗಳ ಒಟ್ಟು ಸಂಖ್ಯೆ 2022-23ರಲ್ಲಿ 7.14 ಲಕ್ಷ ಕೋಟಿಗೆ ತಲುಪುತ್ತಿತ್ತು ಮತ್ತು ಕಾರ್ಮಿಕರ ಸಂಖ್ಯೆ 12.53 ಕೋಟಿಗೆ ಏರಿಕೆಯಾಗುತ್ತಿತ್ತು ಎಂದು ವರದಿ ಹೇಳಿದೆ.

ಅಸಂಘಟಿತ ವಲಯವು ದೇಶದ GVA ಗೆ 44% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು 75% ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23 ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ, ಅಸಂಘಟಿತ ವಲಯವು ದೇಶದ ಜಿವಿಎಗೆ ಶೇ. 44 ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು ಶೇ.75ರಷ್ಟು ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23ರಲ್ಲಿ ಅಸಂಘಟಿತ ವಲಯದ ಉದ್ಯಮಗಳ (ಯುಎಸ್‌ಇ) ಗಾತ್ರ 15.4 ಲಕ್ಷ ಕೋಟಿ ರೂಗಳಷ್ಟಿತ್ತು. 2010-11 ಮತ್ತು 2015-16 ರ ನಡುವೆ ದಾಖಲಾದ ಶೇ.12.9% ಸಿಎಜಿಆರ್‌ಗೆ ಹೋಲಿಸಿದರೆ, 2015-16 ಮತ್ತು 2022-23ರ ನಡುವೆ ಶೇ.4.3ರಷ್ಟು ಸಿಎಜಿಆರ್‌ ಬೆಳವಣಿಗೆ ಕಂಡಿದೆ. 2015-16 ರಿಂದ 2022-23 ರ ಅವಧಿಯಲ್ಲಿ ಯುಎಸ್‌ಯ ಬೆಳವಣಿಗೆಯ ವೇಗವು ಶೇ.12.9 ರಷ್ಟಿತ್ತು. 2022-23 ರಲ್ಲಿ ಅವುಗಳ ಗಾತ್ರವು ರೂ. 26.9 ಲಕ್ಷ ಕೋಟಿಗಳಷ್ಟಿತ್ತು ಎಂದು ಇಂಡಿಯಾ ರೇಟಿಂಗ್ಸ್ ವಿವರಿಸಿದೆ.

ಮೋದಿ ಸರ್ಕಾರದ ವಿರುದ್ದ ಖರ್ಗೆ ಕಿಡಿ

ವರದಿ ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದಿರುಕೊಂಡಿರುವ ಅವರು “ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್‌ಟಿ ಮತ್ತು ಯೋಜಿತವಲ್ಲದ ಕೋವಿಡ್ ಲಾಕ್‌ಡೌನ್‌ನ ವಿನಾಶಕಾರಿ ನಿರ್ಧಾರಗಳ ಮೂಲಕ ಪ್ರಧಾನಿ ಮೋದಿ ಭಾರತೀಯ ಆರ್ಥಿಕತೆಯ ಮೇಲೆ ದುರಂತವನ್ನು ಉಂಟುಮಾಡಿದರು. ಇದು ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸಿತು ಮತ್ತು ಕೋಟ್ಯಂತರ ಜನರ ಜೀವನವನ್ನು ಹಾಳು ಮಾಡಿದವು. ತಮ್ಮ ಜೀವನೋಪಾಯದ ಮೇಲೆ ಹೊಡೆತ ನೀಡಿದ ಮೋದಿ ಸರ್ಕಾರವನ್ನು ಭಾರತೀಯರು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ಪ್ರಚಾರಕ್ಕಾಗಿ ಕೋಟಿಗಟ್ಟಲೆ ಖರ್ಚು ಮಾಡಿದ ಮೇಲೂ, ನಿರ್ಲಜ್ಜ ಸುಳ್ಳು ಹೇಳಿಕೆಗಳ ಹೊರತಾಗಿಯೂ ಸತ್ಯ ಹೊರ ಬರುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಲೇಜು ಶಿಕ್ಷಣ ಇಲಾಖೆ ಪುಸ್ತಕ ಖರೀದಿ ಪಟ್ಟಿಯಲ್ಲಿ ‘ಸಪ್ನ’ ಮೇಲುಗೈ; ಸಣ್ಣ ಪ್ರಕಾಶಕರಿಗೆ ಅನ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...