Homeಮುಖಪುಟನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

ನೋಟು ನಿಷೇಧ, ಜಿಎಸ್‌ಟಿ ಜಾರಿ, ಕೋವಿಡ್‌ನಿಂದಾಗಿ ಅನೌಪಚಾರಿಕ ಕ್ಷೇತ್ರಕ್ಕೆ ₹11.3 ಲಕ್ಷ ಕೋಟಿ ನಷ್ಟ: ವರದಿ

"ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ"

- Advertisement -
- Advertisement -

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳ ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಕೋವಿಡ್ ಸಾಂಕ್ರಾಮಿಕ ಸೇರಿದಂತೆ 2016ರಿಂದ ಸ್ಥೂಲ ಆರ್ಥಿಕ ಆಘಾತಗಳ ಒಟ್ಟು ಪರಿಣಾಮದಿಂದಾಗಿ ವಿಶೇಷವಾಗಿ ಭಾರತದ ಅನೌಪಚಾರಿಕ ಕ್ಷೇತ್ರವು ಜಿಡಿಪಿಯ ಶೇ.4.3 ಅಥವಾ 11.3 ಲಕ್ಷ ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವನ್ನು ಅನುಭವಿಸಿದೆ ಎಂದು ಅಂದಾಜಿಲಾಗಿದೆ ಎಂದು ಇಂಡಿಯಾ ರೇಟಿಂಗ್ಸ್ ಆ್ಯಂಡ್ ರೀಸರ್ಚ್ ಮಂಗಳವಾರ ತನ್ನ ವರದಿಯಲ್ಲಿ ಹೇಳಿದೆ

ಇತ್ತೀಚಿನ ಸ್ಥೂಲ ಆರ್ಥಿಕ ಆಘಾತಗಳು ಈ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಉಂಟು ಮಾಡಿವೆ ಎಂದು ಹೇಳಿರುವ ಇಂಡಿಯಾ ರೇಟಿಂಗ್ಸ್‌ನ ಪ್ರಧಾನ ಅರ್ಥಶಾಸ್ತ್ರಜ್ಞ ಸುನಿಲ್ ಕುಮಾರ್ ಸಿನ್ಹಾ ಅವರು, 2015-16 ಮತ್ತು 2022-23ರ ನಡುವೆ ಅನೌಪಚಾರಿಕ ಕ್ಷೇತ್ರದಲ್ಲಿಯ 63 ಲಕ್ಷ ಉದ್ಯಮಗಳು ಮುಚ್ಚಲ್ಪಟ್ಟಿವೆ ಮತ್ತು ಸುಮಾರು 1.6 ಕೋಟಿ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಿದ್ದಾರೆ. ಈ ಅವಧಿಯಲ್ಲಿ ಆರ್ಥಿಕತೆಯ ಸದೃಢೀಕರಣದಲ್ಲಿ ಏರಿಕೆಯಾಗಿತ್ತು ಮತ್ತು ಇದು ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರಣವಾಗಿತ್ತು. ಆರ್ಥಿಕತೆಯ ಸದೃಢೀಕರಣವು ಮುಂದಕ್ಕೊಯ್ಯುವ ದಾರಿಯಾಗಿದ್ದರೆ, ಅಸಂಘಟಿತ ವಲಯದಲ್ಲಿ ಉದ್ಯಮಗಳ ಸಂಖ್ಯೆ ತಗ್ಗಿದ್ದು ಉದ್ಯೋಗಾವಕಾಶ ಸೃಷ್ಟಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

2022-23ರಲ್ಲಿ ಇಂತಹ ಅಸಂಘಟಿತ ಉದ್ಯಮಗಳಿಂದ ಆರ್ಥಿಕತೆಯಲ್ಲಿ ಗ್ರಾಸ್-ವ್ಯಾಲ್ಯೂ ಆ್ಯಡೆಡ್ (ಜಿವಿಎ) ಅಥವಾ ಒಟ್ಟು ಮೌಲ್ಯದ ಪಾಲು ಈಗಲೂ 2015-16ರ ಮಟ್ಟಕ್ಕಿಂತ ಶೇ.1.6ರಷ್ಟು ಕಡಿಮೆಯಿದೆ. ಅಲ್ಲದೆ 2010-11 ಮತ್ತು 2015-16ರ ನಡುವೆ ಶೇ.7.4ರಷ್ಟಿದ್ದ ಅವುಗಳ ಸಂಯೋಜಿತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್)ವು ಆಗಿನಿಂದ ಶೇ.0.2ರಷ್ಟು ಕುಗ್ಗಿದೆ ಎಂದು ಇತ್ತೀಚಿಗೆ ಬಿಡುಗಡೆಗೊಂಡ ಸರ್ಕಾರದ ಅಸಂಘಟಿತ ವಲಯದ ಉದ್ಯಮಗಳ ವಾರ್ಷಿಕ ಸಮೀಕ್ಷೆಯನ್ನು ಆಧರಿಸಿ ಇಂಡಿಯಾ ರೇಟಿಂಗ್ಸ್ ಹೇಳಿದೆ.

ಸಮೀಕ್ಷೆಯ ಪ್ರಕಾರ, 2021-22ರಲ್ಲಿ 5.97 ಕೋಟಿಯಿದ್ದ ಕೃಷಿಯೇತರ ವಲಯದ ಸಂಸ್ಥೆಗಳ ಸಂಖ್ಯೆ 2022-23ರಲ್ಲಿ 6.5 ಕೋಟಿಗೆ ಏರಿಕೆಯಾಗಿದೆ. ಉದ್ಯೋಗವು 9.79 ಕೋಟಿ ಕಾರ್ಮಿಕರಿಂದ 10.96 ಕೋಟಿಗೆ ಏರಿದೆ. ಆದಾಗ್ಯೂ, ಇದು ಆರ್ಥಿಕ ಆಘಾತಗಳಿಗಿಂತ ಮೊದಲಿನ 2015-16ರ ಅವಧಿಯಲ್ಲಿದ್ದ 11.13 ಕೋಟಿ ಕಾರ್ಮಿಕರ ಸಂಖ್ಯೆಗಿಂತ ಕಡಿಮೆಯಾಗಿದೆ. 2015-16ರಲ್ಲಿ 3.6 ಕೋಟಿಯಷ್ಟಿದ್ದ ಉತ್ಪಾದನಾ ಉದ್ಯೋಗಗಳ ಸಂಖ್ಯೆ 2022-23ರಲ್ಲಿ 3.06ಕ್ಕೆ ಕುಸಿದಿದ್ದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಉತ್ಪಾದನೆ, ವ್ಯಾಪಾರ ಮತ್ತು ಇತರ ಸೇವೆಗಳ (ಎಂಟಿಒ) ಕ್ಷೇತ್ರದಲ್ಲಿ ಅಸಂಘಟಿತ ಉದ್ಯಮಗಳ ನೈಜ ಜಿವಿಎ 2022-23ರಲ್ಲಿ 9.51 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದರಲ್ಲಿ ಭಾರತದ ನೈಜ ಎಂಟಿಒ ಜಿವಿಎ ಪಾಲು 2015-16ರಲ್ಲಿದ್ದ ಶೇ.25.7ರಿಂದ ಶೇ.18.2ಕ್ಕೆ ತೀವ್ರವಾಗಿ ಕುಸಿದಿದೆ ಎಂದು ಇತ್ತೀಚಿನ ದತ್ತಾಂಶಗಳು ಸೂಚಿಸಿವೆ.

ಇತರ ಸೇವೆಗಳು ಮತ್ತು ವ್ಯಾಪಾರದಲ್ಲಿ ಕುಗ್ಗುವಿಕೆಯು ತೀವ್ರವಾಗಿದ್ದು, ಆರ್ಥಿಕ ಆಘಾತಗಳ ಮೊದಲಿನ ಅವಧಿಯಲ್ಲಿ ಶೇ.46.9 ಮತ್ತು ಶೇ.34.3ರಷ್ಟಿದ್ದ ಅಸಂಘಟಿತ ವಲಯದ ಪಾಲು 2022-23ರಲ್ಲಿ ಕ್ರಮವಾಗಿ ಶೇ.32.3 ಮತ್ತು ಶೇ.21.2ಕ್ಕೆ ಕುಸಿದಿದೆ. ಉತ್ಪಾದನಾ ಕ್ಷೇತ್ರದಲ್ಲಿ ಇದೇ ಅವಧಿಯಲ್ಲಿ ಶೇ.12.5ರಿಂದ ಶೇ.10.2ಕ್ಕೆ ಕುಸಿದಿದೆ ಎಂದು ಇಂಡಿಯಾ ರೇಟಿಂಗ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

2015-16ರ ನಂತರದ ಅವಧಿಯಲ್ಲಿ ಸ್ಥೂಲ ಆರ್ಥಿಕ ಆಘಾತಗಳು ಸಂಭವಿಸಿರದಿದ್ದರೆ ಮತ್ತು ಈ ಉದ್ಯಮಗಳ ಬೆಳವಣಿಗೆಯು 2010-11 ಮತ್ತು 2015-16 ನಡುವಿನ ಮಾದರಿಯನ್ನು ಅನುಸರಿಸಿದ್ದರೆ, ಇಂತಹ ಉದ್ಯಮಗಳ ಒಟ್ಟು ಸಂಖ್ಯೆ 2022-23ರಲ್ಲಿ 7.14 ಲಕ್ಷ ಕೋಟಿಗೆ ತಲುಪುತ್ತಿತ್ತು ಮತ್ತು ಕಾರ್ಮಿಕರ ಸಂಖ್ಯೆ 12.53 ಕೋಟಿಗೆ ಏರಿಕೆಯಾಗುತ್ತಿತ್ತು ಎಂದು ವರದಿ ಹೇಳಿದೆ.

ಅಸಂಘಟಿತ ವಲಯವು ದೇಶದ GVA ಗೆ 44% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು 75% ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23 ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ, ಅಸಂಘಟಿತ ವಲಯವು ದೇಶದ ಜಿವಿಎಗೆ ಶೇ. 44 ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಮತ್ತು ಕೃಷಿಯೇತರ ಉದ್ಯಮಗಳಲ್ಲಿ ಉದ್ಯೋಗದಲ್ಲಿರುವ ಸುಮಾರು ಶೇ.75ರಷ್ಟು ಉದ್ಯೋಗಿಗಳನ್ನು ನೇಮಿಸಿಕೊಂಡಿದೆ.

2022-23ರಲ್ಲಿ ಅಸಂಘಟಿತ ವಲಯದ ಉದ್ಯಮಗಳ (ಯುಎಸ್‌ಇ) ಗಾತ್ರ 15.4 ಲಕ್ಷ ಕೋಟಿ ರೂಗಳಷ್ಟಿತ್ತು. 2010-11 ಮತ್ತು 2015-16 ರ ನಡುವೆ ದಾಖಲಾದ ಶೇ.12.9% ಸಿಎಜಿಆರ್‌ಗೆ ಹೋಲಿಸಿದರೆ, 2015-16 ಮತ್ತು 2022-23ರ ನಡುವೆ ಶೇ.4.3ರಷ್ಟು ಸಿಎಜಿಆರ್‌ ಬೆಳವಣಿಗೆ ಕಂಡಿದೆ. 2015-16 ರಿಂದ 2022-23 ರ ಅವಧಿಯಲ್ಲಿ ಯುಎಸ್‌ಯ ಬೆಳವಣಿಗೆಯ ವೇಗವು ಶೇ.12.9 ರಷ್ಟಿತ್ತು. 2022-23 ರಲ್ಲಿ ಅವುಗಳ ಗಾತ್ರವು ರೂ. 26.9 ಲಕ್ಷ ಕೋಟಿಗಳಷ್ಟಿತ್ತು ಎಂದು ಇಂಡಿಯಾ ರೇಟಿಂಗ್ಸ್ ವಿವರಿಸಿದೆ.

ಮೋದಿ ಸರ್ಕಾರದ ವಿರುದ್ದ ಖರ್ಗೆ ಕಿಡಿ

ವರದಿ ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದಿರುಕೊಂಡಿರುವ ಅವರು “ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್‌ಟಿ ಮತ್ತು ಯೋಜಿತವಲ್ಲದ ಕೋವಿಡ್ ಲಾಕ್‌ಡೌನ್‌ನ ವಿನಾಶಕಾರಿ ನಿರ್ಧಾರಗಳ ಮೂಲಕ ಪ್ರಧಾನಿ ಮೋದಿ ಭಾರತೀಯ ಆರ್ಥಿಕತೆಯ ಮೇಲೆ ದುರಂತವನ್ನು ಉಂಟುಮಾಡಿದರು. ಇದು ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸಿತು ಮತ್ತು ಕೋಟ್ಯಂತರ ಜನರ ಜೀವನವನ್ನು ಹಾಳು ಮಾಡಿದವು. ತಮ್ಮ ಜೀವನೋಪಾಯದ ಮೇಲೆ ಹೊಡೆತ ನೀಡಿದ ಮೋದಿ ಸರ್ಕಾರವನ್ನು ಭಾರತೀಯರು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ಪ್ರಚಾರಕ್ಕಾಗಿ ಕೋಟಿಗಟ್ಟಲೆ ಖರ್ಚು ಮಾಡಿದ ಮೇಲೂ, ನಿರ್ಲಜ್ಜ ಸುಳ್ಳು ಹೇಳಿಕೆಗಳ ಹೊರತಾಗಿಯೂ ಸತ್ಯ ಹೊರ ಬರುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಲೇಜು ಶಿಕ್ಷಣ ಇಲಾಖೆ ಪುಸ್ತಕ ಖರೀದಿ ಪಟ್ಟಿಯಲ್ಲಿ ‘ಸಪ್ನ’ ಮೇಲುಗೈ; ಸಣ್ಣ ಪ್ರಕಾಶಕರಿಗೆ ಅನ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...