Homeಮುಖಪುಟನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

ನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ..

- Advertisement -
- Advertisement -

₹ 1,000 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲು ಸಾಧ್ಯವಿಲ್ಲ. ಹಾಗಾಗಿ ನೋಟು ಅಮಾನ್ಯೀಕರಣದ ಕುರಿತ ಸರ್ಕಾರದ ಅಧಿಸೂಚನೆಯು ಕಾನೂನುಬಾಹಿರ ಎಂದು ನ್ಯಾಯಮೂರ್ತಿ ಜಸ್ಟಿಸ್ ಬಿ.ವಿ.ನಾಗರತ್ನರವರು ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಭಿನ್ನಮತದ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ 4:1ರ ಬಹುಮತದ ಆಧಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದಿದೆ. 4 ಜನ ನ್ಯಾಯಾಧೀಶರು ಕೇಂದ್ರ ನಿಲುವನ್ನು ಒಪ್ಪಿದರೆ ಒಬ್ಬರು ನ್ಯಾಯಾಧೀಶರು ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಸೆಕ್ಷನ್ 26 ರ ಪ್ರಕಾರ ಆರ್‌ಬಿಐನ ಕೇಂದ್ರೀಯ ಮಂಡಳಿಯು ಸ್ವತಂತ್ರವಾಗಿ ನೋಟು ಅಮಾನ್ಯೀಕರಣವನ್ನು ಶಿಫಾರಸು ಮಾಡಿರಬೇಕು ಮತ್ತು ಅದು ಸರ್ಕಾರದ ಸಲಹೆಯ ಮೂಲಕ ಮಾಡಬಾರದಿತ್ತು. ಆರ್‌ಬಿಐ ಸ್ವತಂತ್ರ ಮನಸಿನಿಂದ ನೋಟು ನಿಷೇಧದ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಜಸ್ಟಿಸ್ ನಾಗರತ್ನರವರು ಒತ್ತಿ ಹೇಳಿದ್ದಾರೆ.

“ಆರ್‌ಬಿಐ ಸಲ್ಲಿಸಿದ ದಾಖಲೆಗಳನ್ನು ನೋಡಿದಾಗ, “ಕೇಂದ್ರ ಸರ್ಕಾರವು ಬಯಸಿದಂತೆ”, ಶಿಫಾರಸು ಪಡೆಯಲಾಗಿದೆ, “ಸರಕಾರವು 500 ಮತ್ತು 1000 ನೋಟುಗಳ ಕಾನೂನುಬದ್ಧ ಟೆಂಡರ್ ಅನ್ನು ಹಿಂಪಡೆಯಲು ಶಿಫಾರಸು ಮಾಡಿದೆ” ಎಂಬ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ನಾನು ಗಮನಿಸಿದ್ದೇನೆ. ಇವೆಲ್ಲವೂ ಸ್ವಯಂ ವಿವರಣಾತ್ಮಕವಾಗಿವೆ. ಆರ್‌ಬಿಐ ಸ್ವಂತ ಮನಸ್ಸಿನಿಂದ ಯಾವುದೇ ಸ್ವತಂತ್ರ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಇಂತಹ ಗಂಭೀರ ತೀರ್ಮಾನ ತೆಗೆದುಕೊಳ್ಳುವಾಗ ಅದರ ಕುರಿತು ಆಲೋಚಿಸಲು ಸಹ ಆರ್‌ಬಿಐಗೆ ಸಮಯವಿರಲಿಲ್ಲ. 500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ” ಎಂದು ಅವರು ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

“ನನ್ನ ಅಭಿಪ್ರಾಯದಲ್ಲಿ 2016 ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ಅಮಾನ್ಯೀಕರಣವು ಕಾನೂನಿಗೆ ವಿರುದ್ಧವಾದ ಅಧಿಕಾರ ಚಲಾಯಿಸಿ ಜಾರಿಗೊಳಿಸಿರುವುದರಿಂದ ಅದು ಕಾನೂನುಬಾಹಿರ” ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯೀಕರಣವು ಸದುದ್ದೇಶದಿಂದ ಕೂಡಿತ್ತು ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಉತ್ತಮ ಉದ್ದೇಶದ ಪ್ರಶ್ನೆಯಲ್ಲ. ಇದು ಕಪ್ಪು ಹಣ, ಭಯೋತ್ಪಾದಕ ನಿಧಿಯಂತಹ ದುಷ್ಟಶಕ್ತಿಗಳನ್ನು ಗುರಿಯಾಗಿಸಿದೆ. ಆರ್‌ಬಿಐ ಕಾಯಿದೆಯ ಪ್ರಕಾರ ನೋಟು ಅಮಾನ್ಯೀಕರಣದ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಪ್ರಸ್ತಾಪವಾಗಬೇಕು. ಆದರೆ ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿದೆ. ಹಾಗಾಗಿ ಈ ಕ್ರಮವು ಕಾನೂನುಬಾಹಿರವಾಗಿ ಜಾರಿಯಾಗಿದೆ ಎಂದಿದ್ದಾರೆ.

ನಮ್ಮ ದೇಶದ ಸಂಸತ್ತು ನಮ್ಮ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಪ್ರಜಾಪ್ರಭುತ್ವದ ಕೇಂದ್ರವಾಗಿರುವ ಸಂಸತ್ತು ಇಂತಹ ನಿರ್ಣಾಯಕ ಪ್ರಾಮುಖ್ಯತೆಯ ವಿಷಯದಲ್ಲಿ ದೂರವಿರಲು ಸಾಧ್ಯವಿಲ್ಲ ಎಂದು ಜಸ್ಟೀಸ್ ನಾಗರತ್ನರವರು ಅಭಿಪ್ರಾಯಪಟ್ಟಿದ್ದಾರೆ.

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: 2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...