Homeಮುಖಪುಟನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

ನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ..

- Advertisement -
- Advertisement -

₹ 1,000 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲು ಸಾಧ್ಯವಿಲ್ಲ. ಹಾಗಾಗಿ ನೋಟು ಅಮಾನ್ಯೀಕರಣದ ಕುರಿತ ಸರ್ಕಾರದ ಅಧಿಸೂಚನೆಯು ಕಾನೂನುಬಾಹಿರ ಎಂದು ನ್ಯಾಯಮೂರ್ತಿ ಜಸ್ಟಿಸ್ ಬಿ.ವಿ.ನಾಗರತ್ನರವರು ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಭಿನ್ನಮತದ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ 4:1ರ ಬಹುಮತದ ಆಧಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದಿದೆ. 4 ಜನ ನ್ಯಾಯಾಧೀಶರು ಕೇಂದ್ರ ನಿಲುವನ್ನು ಒಪ್ಪಿದರೆ ಒಬ್ಬರು ನ್ಯಾಯಾಧೀಶರು ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಸೆಕ್ಷನ್ 26 ರ ಪ್ರಕಾರ ಆರ್‌ಬಿಐನ ಕೇಂದ್ರೀಯ ಮಂಡಳಿಯು ಸ್ವತಂತ್ರವಾಗಿ ನೋಟು ಅಮಾನ್ಯೀಕರಣವನ್ನು ಶಿಫಾರಸು ಮಾಡಿರಬೇಕು ಮತ್ತು ಅದು ಸರ್ಕಾರದ ಸಲಹೆಯ ಮೂಲಕ ಮಾಡಬಾರದಿತ್ತು. ಆರ್‌ಬಿಐ ಸ್ವತಂತ್ರ ಮನಸಿನಿಂದ ನೋಟು ನಿಷೇಧದ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಜಸ್ಟಿಸ್ ನಾಗರತ್ನರವರು ಒತ್ತಿ ಹೇಳಿದ್ದಾರೆ.

“ಆರ್‌ಬಿಐ ಸಲ್ಲಿಸಿದ ದಾಖಲೆಗಳನ್ನು ನೋಡಿದಾಗ, “ಕೇಂದ್ರ ಸರ್ಕಾರವು ಬಯಸಿದಂತೆ”, ಶಿಫಾರಸು ಪಡೆಯಲಾಗಿದೆ, “ಸರಕಾರವು 500 ಮತ್ತು 1000 ನೋಟುಗಳ ಕಾನೂನುಬದ್ಧ ಟೆಂಡರ್ ಅನ್ನು ಹಿಂಪಡೆಯಲು ಶಿಫಾರಸು ಮಾಡಿದೆ” ಎಂಬ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ನಾನು ಗಮನಿಸಿದ್ದೇನೆ. ಇವೆಲ್ಲವೂ ಸ್ವಯಂ ವಿವರಣಾತ್ಮಕವಾಗಿವೆ. ಆರ್‌ಬಿಐ ಸ್ವಂತ ಮನಸ್ಸಿನಿಂದ ಯಾವುದೇ ಸ್ವತಂತ್ರ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಇಂತಹ ಗಂಭೀರ ತೀರ್ಮಾನ ತೆಗೆದುಕೊಳ್ಳುವಾಗ ಅದರ ಕುರಿತು ಆಲೋಚಿಸಲು ಸಹ ಆರ್‌ಬಿಐಗೆ ಸಮಯವಿರಲಿಲ್ಲ. 500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ” ಎಂದು ಅವರು ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

“ನನ್ನ ಅಭಿಪ್ರಾಯದಲ್ಲಿ 2016 ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ಅಮಾನ್ಯೀಕರಣವು ಕಾನೂನಿಗೆ ವಿರುದ್ಧವಾದ ಅಧಿಕಾರ ಚಲಾಯಿಸಿ ಜಾರಿಗೊಳಿಸಿರುವುದರಿಂದ ಅದು ಕಾನೂನುಬಾಹಿರ” ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯೀಕರಣವು ಸದುದ್ದೇಶದಿಂದ ಕೂಡಿತ್ತು ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಉತ್ತಮ ಉದ್ದೇಶದ ಪ್ರಶ್ನೆಯಲ್ಲ. ಇದು ಕಪ್ಪು ಹಣ, ಭಯೋತ್ಪಾದಕ ನಿಧಿಯಂತಹ ದುಷ್ಟಶಕ್ತಿಗಳನ್ನು ಗುರಿಯಾಗಿಸಿದೆ. ಆರ್‌ಬಿಐ ಕಾಯಿದೆಯ ಪ್ರಕಾರ ನೋಟು ಅಮಾನ್ಯೀಕರಣದ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಪ್ರಸ್ತಾಪವಾಗಬೇಕು. ಆದರೆ ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿದೆ. ಹಾಗಾಗಿ ಈ ಕ್ರಮವು ಕಾನೂನುಬಾಹಿರವಾಗಿ ಜಾರಿಯಾಗಿದೆ ಎಂದಿದ್ದಾರೆ.

ನಮ್ಮ ದೇಶದ ಸಂಸತ್ತು ನಮ್ಮ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಪ್ರಜಾಪ್ರಭುತ್ವದ ಕೇಂದ್ರವಾಗಿರುವ ಸಂಸತ್ತು ಇಂತಹ ನಿರ್ಣಾಯಕ ಪ್ರಾಮುಖ್ಯತೆಯ ವಿಷಯದಲ್ಲಿ ದೂರವಿರಲು ಸಾಧ್ಯವಿಲ್ಲ ಎಂದು ಜಸ್ಟೀಸ್ ನಾಗರತ್ನರವರು ಅಭಿಪ್ರಾಯಪಟ್ಟಿದ್ದಾರೆ.

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: 2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...