Homeಮುಖಪುಟನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

ನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ..

- Advertisement -
- Advertisement -

₹ 1,000 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲು ಸಾಧ್ಯವಿಲ್ಲ. ಹಾಗಾಗಿ ನೋಟು ಅಮಾನ್ಯೀಕರಣದ ಕುರಿತ ಸರ್ಕಾರದ ಅಧಿಸೂಚನೆಯು ಕಾನೂನುಬಾಹಿರ ಎಂದು ನ್ಯಾಯಮೂರ್ತಿ ಜಸ್ಟಿಸ್ ಬಿ.ವಿ.ನಾಗರತ್ನರವರು ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಭಿನ್ನಮತದ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ 4:1ರ ಬಹುಮತದ ಆಧಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದಿದೆ. 4 ಜನ ನ್ಯಾಯಾಧೀಶರು ಕೇಂದ್ರ ನಿಲುವನ್ನು ಒಪ್ಪಿದರೆ ಒಬ್ಬರು ನ್ಯಾಯಾಧೀಶರು ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಸೆಕ್ಷನ್ 26 ರ ಪ್ರಕಾರ ಆರ್‌ಬಿಐನ ಕೇಂದ್ರೀಯ ಮಂಡಳಿಯು ಸ್ವತಂತ್ರವಾಗಿ ನೋಟು ಅಮಾನ್ಯೀಕರಣವನ್ನು ಶಿಫಾರಸು ಮಾಡಿರಬೇಕು ಮತ್ತು ಅದು ಸರ್ಕಾರದ ಸಲಹೆಯ ಮೂಲಕ ಮಾಡಬಾರದಿತ್ತು. ಆರ್‌ಬಿಐ ಸ್ವತಂತ್ರ ಮನಸಿನಿಂದ ನೋಟು ನಿಷೇಧದ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಜಸ್ಟಿಸ್ ನಾಗರತ್ನರವರು ಒತ್ತಿ ಹೇಳಿದ್ದಾರೆ.

“ಆರ್‌ಬಿಐ ಸಲ್ಲಿಸಿದ ದಾಖಲೆಗಳನ್ನು ನೋಡಿದಾಗ, “ಕೇಂದ್ರ ಸರ್ಕಾರವು ಬಯಸಿದಂತೆ”, ಶಿಫಾರಸು ಪಡೆಯಲಾಗಿದೆ, “ಸರಕಾರವು 500 ಮತ್ತು 1000 ನೋಟುಗಳ ಕಾನೂನುಬದ್ಧ ಟೆಂಡರ್ ಅನ್ನು ಹಿಂಪಡೆಯಲು ಶಿಫಾರಸು ಮಾಡಿದೆ” ಎಂಬ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ನಾನು ಗಮನಿಸಿದ್ದೇನೆ. ಇವೆಲ್ಲವೂ ಸ್ವಯಂ ವಿವರಣಾತ್ಮಕವಾಗಿವೆ. ಆರ್‌ಬಿಐ ಸ್ವಂತ ಮನಸ್ಸಿನಿಂದ ಯಾವುದೇ ಸ್ವತಂತ್ರ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಇಂತಹ ಗಂಭೀರ ತೀರ್ಮಾನ ತೆಗೆದುಕೊಳ್ಳುವಾಗ ಅದರ ಕುರಿತು ಆಲೋಚಿಸಲು ಸಹ ಆರ್‌ಬಿಐಗೆ ಸಮಯವಿರಲಿಲ್ಲ. 500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ” ಎಂದು ಅವರು ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

“ನನ್ನ ಅಭಿಪ್ರಾಯದಲ್ಲಿ 2016 ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ಅಮಾನ್ಯೀಕರಣವು ಕಾನೂನಿಗೆ ವಿರುದ್ಧವಾದ ಅಧಿಕಾರ ಚಲಾಯಿಸಿ ಜಾರಿಗೊಳಿಸಿರುವುದರಿಂದ ಅದು ಕಾನೂನುಬಾಹಿರ” ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯೀಕರಣವು ಸದುದ್ದೇಶದಿಂದ ಕೂಡಿತ್ತು ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಉತ್ತಮ ಉದ್ದೇಶದ ಪ್ರಶ್ನೆಯಲ್ಲ. ಇದು ಕಪ್ಪು ಹಣ, ಭಯೋತ್ಪಾದಕ ನಿಧಿಯಂತಹ ದುಷ್ಟಶಕ್ತಿಗಳನ್ನು ಗುರಿಯಾಗಿಸಿದೆ. ಆರ್‌ಬಿಐ ಕಾಯಿದೆಯ ಪ್ರಕಾರ ನೋಟು ಅಮಾನ್ಯೀಕರಣದ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಪ್ರಸ್ತಾಪವಾಗಬೇಕು. ಆದರೆ ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿದೆ. ಹಾಗಾಗಿ ಈ ಕ್ರಮವು ಕಾನೂನುಬಾಹಿರವಾಗಿ ಜಾರಿಯಾಗಿದೆ ಎಂದಿದ್ದಾರೆ.

ನಮ್ಮ ದೇಶದ ಸಂಸತ್ತು ನಮ್ಮ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಪ್ರಜಾಪ್ರಭುತ್ವದ ಕೇಂದ್ರವಾಗಿರುವ ಸಂಸತ್ತು ಇಂತಹ ನಿರ್ಣಾಯಕ ಪ್ರಾಮುಖ್ಯತೆಯ ವಿಷಯದಲ್ಲಿ ದೂರವಿರಲು ಸಾಧ್ಯವಿಲ್ಲ ಎಂದು ಜಸ್ಟೀಸ್ ನಾಗರತ್ನರವರು ಅಭಿಪ್ರಾಯಪಟ್ಟಿದ್ದಾರೆ.

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: 2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...