Homeಮುಖಪುಟನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

ನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ..

- Advertisement -
- Advertisement -

₹ 1,000 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲು ಸಾಧ್ಯವಿಲ್ಲ. ಹಾಗಾಗಿ ನೋಟು ಅಮಾನ್ಯೀಕರಣದ ಕುರಿತ ಸರ್ಕಾರದ ಅಧಿಸೂಚನೆಯು ಕಾನೂನುಬಾಹಿರ ಎಂದು ನ್ಯಾಯಮೂರ್ತಿ ಜಸ್ಟಿಸ್ ಬಿ.ವಿ.ನಾಗರತ್ನರವರು ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಭಿನ್ನಮತದ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ 4:1ರ ಬಹುಮತದ ಆಧಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದಿದೆ. 4 ಜನ ನ್ಯಾಯಾಧೀಶರು ಕೇಂದ್ರ ನಿಲುವನ್ನು ಒಪ್ಪಿದರೆ ಒಬ್ಬರು ನ್ಯಾಯಾಧೀಶರು ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಸೆಕ್ಷನ್ 26 ರ ಪ್ರಕಾರ ಆರ್‌ಬಿಐನ ಕೇಂದ್ರೀಯ ಮಂಡಳಿಯು ಸ್ವತಂತ್ರವಾಗಿ ನೋಟು ಅಮಾನ್ಯೀಕರಣವನ್ನು ಶಿಫಾರಸು ಮಾಡಿರಬೇಕು ಮತ್ತು ಅದು ಸರ್ಕಾರದ ಸಲಹೆಯ ಮೂಲಕ ಮಾಡಬಾರದಿತ್ತು. ಆರ್‌ಬಿಐ ಸ್ವತಂತ್ರ ಮನಸಿನಿಂದ ನೋಟು ನಿಷೇಧದ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಜಸ್ಟಿಸ್ ನಾಗರತ್ನರವರು ಒತ್ತಿ ಹೇಳಿದ್ದಾರೆ.

“ಆರ್‌ಬಿಐ ಸಲ್ಲಿಸಿದ ದಾಖಲೆಗಳನ್ನು ನೋಡಿದಾಗ, “ಕೇಂದ್ರ ಸರ್ಕಾರವು ಬಯಸಿದಂತೆ”, ಶಿಫಾರಸು ಪಡೆಯಲಾಗಿದೆ, “ಸರಕಾರವು 500 ಮತ್ತು 1000 ನೋಟುಗಳ ಕಾನೂನುಬದ್ಧ ಟೆಂಡರ್ ಅನ್ನು ಹಿಂಪಡೆಯಲು ಶಿಫಾರಸು ಮಾಡಿದೆ” ಎಂಬ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ನಾನು ಗಮನಿಸಿದ್ದೇನೆ. ಇವೆಲ್ಲವೂ ಸ್ವಯಂ ವಿವರಣಾತ್ಮಕವಾಗಿವೆ. ಆರ್‌ಬಿಐ ಸ್ವಂತ ಮನಸ್ಸಿನಿಂದ ಯಾವುದೇ ಸ್ವತಂತ್ರ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಇಂತಹ ಗಂಭೀರ ತೀರ್ಮಾನ ತೆಗೆದುಕೊಳ್ಳುವಾಗ ಅದರ ಕುರಿತು ಆಲೋಚಿಸಲು ಸಹ ಆರ್‌ಬಿಐಗೆ ಸಮಯವಿರಲಿಲ್ಲ. 500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ” ಎಂದು ಅವರು ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

“ನನ್ನ ಅಭಿಪ್ರಾಯದಲ್ಲಿ 2016 ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ಅಮಾನ್ಯೀಕರಣವು ಕಾನೂನಿಗೆ ವಿರುದ್ಧವಾದ ಅಧಿಕಾರ ಚಲಾಯಿಸಿ ಜಾರಿಗೊಳಿಸಿರುವುದರಿಂದ ಅದು ಕಾನೂನುಬಾಹಿರ” ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯೀಕರಣವು ಸದುದ್ದೇಶದಿಂದ ಕೂಡಿತ್ತು ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಉತ್ತಮ ಉದ್ದೇಶದ ಪ್ರಶ್ನೆಯಲ್ಲ. ಇದು ಕಪ್ಪು ಹಣ, ಭಯೋತ್ಪಾದಕ ನಿಧಿಯಂತಹ ದುಷ್ಟಶಕ್ತಿಗಳನ್ನು ಗುರಿಯಾಗಿಸಿದೆ. ಆರ್‌ಬಿಐ ಕಾಯಿದೆಯ ಪ್ರಕಾರ ನೋಟು ಅಮಾನ್ಯೀಕರಣದ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಪ್ರಸ್ತಾಪವಾಗಬೇಕು. ಆದರೆ ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿದೆ. ಹಾಗಾಗಿ ಈ ಕ್ರಮವು ಕಾನೂನುಬಾಹಿರವಾಗಿ ಜಾರಿಯಾಗಿದೆ ಎಂದಿದ್ದಾರೆ.

ನಮ್ಮ ದೇಶದ ಸಂಸತ್ತು ನಮ್ಮ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಪ್ರಜಾಪ್ರಭುತ್ವದ ಕೇಂದ್ರವಾಗಿರುವ ಸಂಸತ್ತು ಇಂತಹ ನಿರ್ಣಾಯಕ ಪ್ರಾಮುಖ್ಯತೆಯ ವಿಷಯದಲ್ಲಿ ದೂರವಿರಲು ಸಾಧ್ಯವಿಲ್ಲ ಎಂದು ಜಸ್ಟೀಸ್ ನಾಗರತ್ನರವರು ಅಭಿಪ್ರಾಯಪಟ್ಟಿದ್ದಾರೆ.

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: 2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...