Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...